ಆ್ಯಪ್ನಗರ

ಮಂಗಳೂರಿಗೆ ನೂತನ ಡಿಸಿಪಿಯಾಗಿ ವಿನಯ್ ಗಾಂವ್ಕರ್ ರಾಜ್ಯ ಸರ್ಕಾರ ಆದೇಶ

ರಾಜ್ಯ ಪೊಲೀಸ್‌ ಇಲಾಖೆಯ ಅನೇಕ ಅಧಿಕಾರಿಗಳನ್ನು ವರ್ಗಾವಣೆ ಪ್ರಕ್ರಿಯೆ ಶುಕ್ರವಾರ ನಡೆದಿದ್ದು, ಈ ಹಿನ್ನೆಲೆ ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪಪೊಲೀಸ್‌ ಆಯುಕ್ತ ಲಕ್ಷ್ಮೀ ಗಣೇಶ್‌ ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಲಕ್ಷ್ಮೀ ಗಣೇಶ್‌ ಅವರ ಸ್ಥಾನಕ್ಕೆ ವಿನಯ್‌ ಗಾಂವ್ಕರ್‌ ಅವರನ್ನು ನಿಯುಕ್ತಿಗೊಳಿಸಲಾಗಿದೆ.

Vijaya Karnataka Web 8 Aug 2020, 1:13 pm
ಮಂಗಳೂರು: ಮಂಗಳೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ನೂತನ ಉಪಪೊಲೀಸ್‌ ಆಯುಕ್ತರಾಗಿ ವಿನಯ್‌ ಗಾಂವ್ಕರ್‌ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web Vinay gaonkar


ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹ ಭೀತಿ: ಕಾಳಜಿ ಕೇಂದ್ರ ಆರಂಭ, 32 ಕುಟುಂಬಗಳ ಸ್ಥಳಾಂತರ

ರಾಜ್ಯ ಪೊಲೀಸ್‌ ಇಲಾಖೆಯ ಅನೇಕ ಅಧಿಕಾರಿಗಳನ್ನು ವರ್ಗಾವಣೆ ಪ್ರಕ್ರಿಯೆ ಶುಕ್ರವಾರ ನಡೆದಿದ್ದು, ಈ ಹಿನ್ನೆಲೆ ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪಪೊಲೀಸ್‌ ಆಯುಕ್ತ ಲಕ್ಷ್ಮೀ ಗಣೇಶ್‌ ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಲಕ್ಷ್ಮೀ ಗಣೇಶ್‌ ಅವರ ಸ್ಥಾನಕ್ಕೆ ವಿನಯ್‌ ಗಾಂವ್ಕರ್‌ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಗಾಂವ್ಕರ್‌ ಅವರಿಗೆ ಇತ್ತೀಚೆಗಷ್ಟೇ ಪದೋನ್ನತಿಯಾಗಿದ್ದು, ಯಾವುದೇ ಹುದ್ದೆ ನೀಡಿರಲಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ: ದ್ವಿಶತಕ ದಾಟಿದ ಕೊರೊನಾ ಸಾವು

ಲಕ್ಷ್ಮೀಗಣೇಶ್‌ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಉಳಿದಂತೆ ವಿ.ಜೆ. ಸಜೀತ್‌ ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ, ಸಾರಾ ಫಾತಿಮಾ ಸಿಐಡಿ ಎಸ್ಪಿ ಸೇರಿದಂತೆ 8 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರಿನ ಭಯಾನಕ ವಿಮಾನ ದುರಂತವನ್ನು ನೆನಪಿಸಿದ ಕೇರಳದ ವಿಮಾನ ಅಪಘಾತ..!

ಇದೇ ವೇಳೆ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‌ ಅಧೀಕ್ಷಕರಾಗಿ ಸಿ.ಎನ್‌. ಬೋಪಯ್ಯ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇನ್ನು ಮಂಗಳೂರು ನಗರ ಸಂಚಾರ ವಿಭಾಗದಲ್ಲಿ ಸಹಾಯಕ ಪೊಲೀಸ್‌ ಆಯುಕ್ತರಾಗಿದ್ದ ಮಂಜುನಾಥ್‌ ಶೆಟ್ಟಿ ಅವರನ್ನು ಇತ್ತೀಚೆಗೆ ಪದೋನ್ನತಿಗೊಳಿಸಲಾಗಿದ್ದು, ಕರ್ನಾ?ಟಕ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರಾಗಿ ನಿಯುಕ್ತಿಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ