ಆ್ಯಪ್ನಗರ

ಬಂಟ್ವಾಳ ಪ್ರವಾಹದಿಂದ ಮಂಗಳೂರಿಗೆ ನೀರು ವ್ಯತ್ಯಯ

ಬಂಟ್ವಾಳದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮೆಸ್ಕಾಂ ವಿದ್ಯುತ್ ನಿಲುಗಡೆಗೊಳಿಸಿರುವುದರಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಮೇಯರ್ ಭಾಸ್ಕರ ಮೊಯ್ಲಿ ಹೇಳಿದರು.

Vijaya Karnataka Web 17 Aug 2018, 2:04 pm
ಮಂಗಳೂರು: ಬಂಟ್ವಾಳದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮೆಸ್ಕಾಂ ವಿದ್ಯುತ್ ನಿಲುಗಡೆಗೊಳಿಸಿರುವುದರಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಮೇಯರ್ ಭಾಸ್ಕರ ಮೊಯ್ಲಿ ಹೇಳಿದರು.
Vijaya Karnataka Web water1


ತುಂಬೆ ವೆಂಟೆಡ್ ಡ್ಯಾಮ್ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಅವಲೋಕನ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ತುಂಬೆ ವೆಂಟೆಡ್ ಡ್ಯಾಮ್ ಸಮೀಪ ಹಿನ್ನೀರು ಪ್ರದೇಶದಲ್ಲಿ ಬಂಟ್ವಾಳ ಸಬ್‌ಸ್ಟೇಶನ್‌ನಿಂದ ತುಂಬೆ ಪಂಪ್ ಹೌಸ್ ಗೆ 33 ಕೆವಿ ವಿದ್ಯುತ್ ಲೈನ್ ಎಳೆಯಲಾಗಿದೆ. ನೇತ್ರಾವತಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾದ ಕಾರಣ ವಿದ್ಯುತ್ ಸರಬರಾಜು ನಿಲ್ಲಿಸಲಾಯಿತು. ಇದರಿಂದ ತುಂಬೆಯಲ್ಲಿ ಪಂಪಿಂಗ್ ಸಾಧ್ಯವಾಗದೆ ಗುರುವಾರ ನಗರಕ್ಕೆ ನೀರು ಸರಬರಾಜಿನಲ್ಲಿ ಅಡಚಣೆ ಉಂಟಾಯಿತು ಎಂದು ಮೇಯರ್ ವಿವರಿಸಿದರು.

ಗುರುವಾರ ರಾತ್ರಿ ನೇತ್ರಾವತಿ ನದಿ ನೀರಿನ ಮಟ್ಟ 9.1 ಮೀಟರ್ ಗೆ ಏರಿತ್ತು. ನೇತ್ರಾವತಿ ನದಿ ನೀರಿನ ಮಟ್ಟ 8.5 ಮೀಟರ್‌ಗಿಂತ ಏರಿಕೆಯಾದರೆ ಮಂಗಳೂರಿಗೆ ಕುಡಿಯುವ ನೀರು ಕೊಡಲು ತೊಂದರೆಯಾಗುತ್ತದೆ ಎಂದು ಮೇಯರ್ ವಿವರಿಸಿದರು.

ಭಾರಿ ಮಳೆಯಿಂದ ಮಂಗಳೂರಿನ ಅನೇಕ ಕಡೆಗಳಲ್ಲಿ ಹಾನಿಯುಂಟಾಗಿದೆ. ಗುರುವಾರ ನಗರದ ಕೆನರಾ ಪ್ರೌಢಶಾಲೆ ಹಾಗೂ ಬಲ್ಮಠ ಕಾಲೇಜು ಬಳಿ ಮರ ಬಿದ್ದು ಹಾನಿಯುಂಟಾಗಿದೆ ಎಂದರು.


ತುಂಬೆ ವೆಂಟೆಡ್ ಡ್ಯಾಂನ ಎರಡು ಕಡೆಗಳಲ್ಲಿ ತಡೆಗೋಡೆ ಕುಸಿದಿದ್ದು, ದುರಸ್ತಿಗೆ ಸುಮಾರು 15 ಕೋಟಿ ವೆಚ್ಚ ತಗಲಲಿದೆ. ಈ ಕುರಿತು ರಾಜ್ಯ ಸರಕಾರಕ್ಕೆ ಬರೆಯಲಾಗಿದೆ ಎಂದು ಅವರು ತಿಳಿಸಿದರು.

ಒಂದು ಕಡೆ ಸುಮಾರು 35 ಮೀಟರ್ ಹಾಗೂ ಇನ್ನೊಂದು ಕಡೆ 20 ಮೀಟರ್ ಕುಸಿತ ಉಂಟಾಗಿದೆ. ದುರಸ್ತಿಗೆ ಒಟ್ಟು 15 ಕೋಟಿ ರೂ. ವೆಚ್ಚ ತಗುಲಲಿದೆ. 10 ಕೋಟಿ ರೂ. ಒದಗಿಸುವಂತೆ ಸರಕಾರಕ್ಕೆ ಬರೆಯಲಾಗಿದೆ. ಡ್ಯಾಂನಲ್ಲಿ ನೀರಿನ ಮಟ್ಟ 4 ಮೀಟರ್ ಗೆ ಬಂದ ಬಳಿಕವಷ್ಟೇ ದುರಸ್ತಿ ಕಾರ್ಯ ಸಾಧ್ಯ. ತಾತ್ಕಾಲಿಕವಾಗಿ ಹೈದರಾಬಾದ್‌ನ ತಂತ್ರಜ್ಞರ ಮೂಲಕ ಪಾಲಿಜಿಯೋ ಫೈಬರ್ ಬ್ಯಾಗ್ ಗಳನ್ನು ಅಳವಡಿಸಲಾಗುವುದು. ಶನಿವಾರದೊಳಗೆ ಅಂದಾಜು ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ