ಆ್ಯಪ್ನಗರ

ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ

ಸೋಮವಾರ ದುಬೈಯಿಂದ ಏರ್‌ ಇಂಡಿಯಾ ವಿಮಾನದಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರು ತಮ್ಮ ಗುದದ್ವಾರದಲ್ಲಿ ಚಿನ್ನವನ್ನು ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು. ನಿಲ್ದಾಣದ ಕಸ್ಟಮ… ಅಧಿಕಾರಿಗಳು ಈ ಇಬ್ಬರು ಪ್ರಯಾಣಿಕರನ್ನು ಸಂಶಯದ ಮೇರೆಗೆ ವಿಚಾರಣೆ ನಡೆಸಿದಾಗ ಗುದದ್ವಾರದಲ್ಲಿ ಚಿನ್ನ ಇಟ್ಟು ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

Vijaya Karnataka 12 Mar 2019, 12:54 pm
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ದುಬೈಯಿಂದ ಬಂದಿಳಿದ ಇಬ್ಬರು ಪ್ರಯಾಣಿಕರು ತಮ್ಮ ಗುದದ್ವಾರದಲ್ಲಿ ಚಿನ್ನವನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ ಪ್ರಕರಣವನ್ನು ವಿಮಾನ ನಿಲ್ದಾಣದ ಕಸ್ಟಮ್ಸ… ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
Vijaya Karnataka Web Gold


ಸೋಮವಾರ ದುಬೈಯಿಂದ ಏರ್‌ ಇಂಡಿಯಾ ವಿಮಾನದಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರು ತಮ್ಮ ಗುದದ್ವಾರದಲ್ಲಿ ಚಿನ್ನವನ್ನು ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು. ನಿಲ್ದಾಣದ ಕಸ್ಟಮ… ಅಧಿಕಾರಿಗಳು ಈ ಇಬ್ಬರು ಪ್ರಯಾಣಿಕರನ್ನು ಸಂಶಯದ ಮೇರೆಗೆ ವಿಚಾರಣೆ ನಡೆಸಿದಾಗ ಗುದದ್ವಾರದಲ್ಲಿ ಚಿನ್ನ ಇಟ್ಟು ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳಿಂದ ಸುಮಾರು 26.92 ಲಕ್ಷ ಮೌಲ್ಯದ 821.50 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ವಿಚಾರಣೆ ನಡೆಸಲಾಗುತ್ತಿದೆ. ಶನಿವಾರವಷ್ಟೇ ಮೂವರು ಪ್ರಯಾಣಿಕರಿಂದ ಸುಮಾರು 49 ಲಕ್ಷ ರೂ. ಮೌಲ್ಯದ 1,532 ಗ್ರಾಂ ಚಿನ್ನವನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ