ಆ್ಯಪ್ನಗರ

ಭಿವಂಡಿ ಕಟ್ಟಡ ಕುಸಿತ ಪ್ರಕರಣ: 40ಕ್ಕೆ ಏರಿದ ಸಾವಿನ ಸಂಖ್ಯೆ, ಮುಂದುವರಿದ ರಕ್ಷಣಾ ಕಾರ್ಯ

ಮಹಾರಾಷ್ಟ್ರದ ಭಿವಂಡಿಯಲ್ಲಿ ಸೋಮವಾರ ಕುಸಿದ ಬಹುಮಹಡಿ ಕಟ್ಟಡ ಪ್ರಕರಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದುವರೆಗೂ 40 ಜನ ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ANI 23 Sep 2020, 4:19 pm
ಮುಂಬಯಿ: ಮಹಾರಾಷ್ಟ್ರದ ಥಾಣೆ ಬಳಿಯ ಭಿವಂಡಿಯ ಜಿಲಾನಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಇದುವರೆಗೂ 40 ಜನ ಮೃತಪಟ್ಟಿದ್ದಾರೆ. ಬುಧವಾರ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 14ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಭೀಕರ ದುರಂತದಲ್ಲಿ 15 ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ.
Vijaya Karnataka Web bhiwandi building collapse death toll rises to 40 rescue operation under way
ಭಿವಂಡಿ ಕಟ್ಟಡ ಕುಸಿತ ಪ್ರಕರಣ: 40ಕ್ಕೆ ಏರಿದ ಸಾವಿನ ಸಂಖ್ಯೆ, ಮುಂದುವರಿದ ರಕ್ಷಣಾ ಕಾರ್ಯ


ಸೋಮವಾರ ಕಟ್ಟಡ ಕುಸಿತವಾದಾಗ ಬಹಳಷ್ಟು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಸೋಮವಾರ 25ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿತ್ತು. ಗಾಯಗೊಂಡವರನ್ನು ಮುಂಬಯಿನ ಕಲ್ವಾ ಮತ್ತು ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.


ಭಾರೀ ಮಳೆಯ ನಡುವೆಯೂ ಕಳೆದ ಎರಡು ದಿನಗಳಿಂದ ಎನ್‌ಡಿಆರ್‌ಎಫ್‌ ಹಾಗೂ ಥಾಣೆಯ ಸ್ಥಳೀಯ ವಿಪತ್ತು ನಿರ್ವಹಣಾ ತಂಡ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಎರಡು ದಿನಗಳಿಂದ ಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ಮೂರು ಮಹಡಿ ಕಟ್ಟಡ ಕುಸಿತ, ಹೋಯ್ತು ಗಾಢ ನಿದ್ರೆಯಲ್ಲಿದ್ದ 10 ಮಂದಿಯ ಪ್ರಾಣ!

43 ವರ್ಷದಷ್ಟು ಹಳೆಯದಾದ ಮೂರು ಅಂತಸ್ತಿನ ಜಿಲಾನಿ ಕಟ್ಟಡ ಸೋಮವಾರ ಮುಂಜಾನೆ 3.40ರ ಸುಮಾರಿಗೆ ಕುಸಿದು ಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥಾಣೆಯಿಂದ 10 ಕಿ.ಮೀ ದೂರದಲ್ಲಿರುವ ಭಿವಿಂಡಿಯ ಈ ಕಟ್ಟಡದಲ್ಲಿ 40 ಫ್ಲ್ಯಾಟ್‌ಗಳಿದ್ದು, ಇದರಲ್ಲಿ 150 ಮಂದಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಮಹಾರಾಷ್ಟ್ರ ಕಟ್ಟಡ ಕುಸಿತ: 11ಕ್ಕೇರಿದ ಸಾವಿನ ಸಂಖ್ಯೆ; ಅವಶೇಷಗಳಡಿ ಇನ್ನೂ ಹಲವರಿರುವ ಶಂಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ