ಆ್ಯಪ್ನಗರ

'ಮಹಾ' ಸರಕಾರದಲ್ಲಿ ಬಿರುಕು..? ರಾವತ್, ಫಡ್ನವೀಸ್‌ ಭೇಟಿ ಬೆನ್ನಲ್ಲೇ ಉದ್ಧವ್‌ ಠಾಕ್ರೆ-ಪವಾರ್ ಮಾತುಕತೆ‌..!

ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿಯಲ್ಲಿ ಮತ್ತೆ ಭಿನ್ನಮತ ಸೃಷ್ಟಿಯಾದಂತೆ ಕಾಣುತ್ತಿದೆ. ಶಿವಸೇನೆ ನಾಯಕ ಸಂಜಯ್‌ ರಾವತ್‌ ಮತ್ತು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಭೇಟಿ ಬೆನ್ನಲ್ಲಿಯೇ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಅವರನ್ನು ಎನ್‌ಸಿಪಿ ನಾಯಕ ಶರದ್‌ ಪವಾರ್‌ ಮಾತುಕತೆ ನಡೆಸಿದ್ದಾರೆ.

Agencies 27 Sep 2020, 8:15 pm
ಮುಂಬಯಿ: ಶಿವಸೇನೆ ನಾಯಕ ಸಂಜಯ್‌ ರಾವತ್‌ ಮತ್ತು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಭೇಟಿ ಬೆನ್ನಲ್ಲಿಯೇ ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿಯಲ್ಲಿ ಭಿನ್ನಮತ ಸೃಷ್ಟಿಯಾದಂತೆ ಕಾಣುತ್ತಿದೆ. ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಅವರನ್ನು ಎನ್‌ಸಿಪಿ ನಾಯಕ ಶರದ್‌ ಪವಾರ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Vijaya Karnataka Web discord in aghadi over sanjay raut devendra fadnavis meet ncps sharad pawar meets uddhav thackeray
'ಮಹಾ' ಸರಕಾರದಲ್ಲಿ ಬಿರುಕು..? ರಾವತ್, ಫಡ್ನವೀಸ್‌ ಭೇಟಿ ಬೆನ್ನಲ್ಲೇ ಉದ್ಧವ್‌ ಠಾಕ್ರೆ-ಪವಾರ್ ಮಾತುಕತೆ‌..!


ಮೂಲಗಳ ಪ್ರಕಾರ, ರಾವತ್‌ ಮತ್ತು ಫಡ್ನವೀಸ್‌ ನಡುವಿನ ಸಭೆ ಬಗ್ಗೆ ಕಾಂಗ್ರೆಸ್ ಮತ್ತು ಎನ್‌ಸಿಪಿಯಲ್ಲಿ ಅಸಮಾಧಾನವಿದೆ ಎಂದು ಹೇಳಲಾಗುತ್ತಿದೆ. ಆದ್ದರಿಂದ, ಭಾನುವಾರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಲಾ ಸಾಹೇಬ್ ಥೋರತ್ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮುಂಬೈನ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಮಹಾ ವಿಕಾಸ್‌ ಅಘಾಡಿ ಮೈತ್ರಿ ಮೇಲೆ ಪರಿಣಾಮ ಬೀರುವ ಅಥವಾ ಮಹಾರಾಷ್ಟ್ರ ಸರಕಾರದ ಬಗ್ಗೆ ಪ್ರಶ್ನೆಗಳನ್ನು ಎತ್ತುವ ಯಾವುದೇ ಕೆಲಸದಲ್ಲಿ ಮೂರು ಪಕ್ಷಗಳ ನಾಯಕರು ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರಕಾರದ ಕೃಷಿ ಮಸೂದೆಗಳನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಮತ್ತು ಅದನ್ನು ಮಹಾರಾಷ್ಟ್ರದಲ್ಲಿ ಜಾರಿಗೆ ತರಲು ಬಿಡಬಾರದು ಎಂದು ಥೋರತ್ ಒತ್ತಾಯಿಸಿದರು. ಮೈತ್ರಿಕೂಟ ಪಾಲುದಾರರಾಗಿರುವ ಶಿವಸೇನೆ ಈ ವಿಷಯದ ಬಗ್ಗೆ ಕಾಂಗ್ರೆಸ್‌ನ್ನು ಬಹಿರಂಗವಾಗಿ ಬೆಂಬಲಿಸಬೇಕು ಎಂದು ಅವರು ಹೇಳಿದ್ದಾರೆ.

ಮುಂಬೈನ ಸ್ಟಾರ್‌ ಹೋಟೆಲ್‌ನಲ್ಲಿ ಫಡ್ನವೀಸ್-ರಾವತ್ ಭೇಟಿ: 'ಪರ್ಸನಲ್ ಟಾಕ್ಸ್' ಎಂದ ಬಿಜೆಪಿ!

ಶನಿವಾರ ಸಂಜಯ್‌ ರಾವತ್‌ ಹಾಗೂ ದೇವೇಂದ್ರ ಫಡ್ನವೀಸ್‌ ನಡುವೆ ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆದಿತ್ತು. ಈ ಮಾತುಕತೆ ರಾಜಕೀಯ ವಲಯದಲ್ಲಿ ಹಲವಾರು ಊಹಾಪೋಹಗಳಿಗೆ ಕಾರಣವಾಗಿತ್ತು. ಕಳೆದ ವರ್ಷ ನಡೆದ ಚುನಾವಣೆಯ ನಂತರ ಶಿವಸೇನೆ ಹಾಗೂ ಬಿಜೆಪಿ ನಡುವೆ ಮೂಡಿದ ಬಿರುಕಿನ ನಂತರ ಎರಡೂ ಪಕ್ಷಗಳ ನಾಯಕರ ನಡುವೆ ನಡೆದ ಮೊದಲ ಸಭೆ ಇದಾಗಿತ್ತು.

ಸಿಎಂ ಮುಖವಾಡ ಕಳಚಿಟ್ಟು ವಿರೋಧ ಪಕ್ಷಗಳ ಬಗ್ಗೆ ಮಾತನಾಡ್ತೇನೆ- ಬಿಜೆಪಿಗೆ ಉದ್ಧವ್‌ ಠಾಕ್ರೆ ಎಚ್ಚರಿಕೆ

ಸಭೆ ನಂತರ ಸೃಷ್ಟಿಯಾಗಿದ್ದ ಹಲವು ಊಹಾಪೋಹಗಳಿಗೆ ಭಾನುವಾರ ಸ್ಪಷ್ಟನೆ ನೀಡಿದ್ದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌, ಶಿವಸೇನೆ ಜೊತೆ ಕೈಜೋಡಿಸುವ ಅಥವಾ ಉದ್ಧವ್ ಠಾಕ್ರೆ ನೇತೃತ್ವದ ರಾಜ್ಯ ಸರಕಾರವನ್ನು ಉರುಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ಆ ಸಭೆ ಕೇವಲ ಶಿವಸೇನೆಯ ಮುಖವಾಣಿ ಸಾಮನಾದ ಸಂದರ್ಶನಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದರು.

'ಮಹಾರಾಷ್ಟ್ರ ಸರಕಾರ ಆಟೋ ರಿಕ್ಷಾವಾದರೂ ಸ್ಟೀರಿಂಗ್‌ ನನ್ನ ಕೈಯಲ್ಲಿದೆ': ಬಿಜೆಪಿಗೆ ಉದ್ಧವ್‌ ಠಾಕ್ರೆ ತಿರುಗೇಟು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ