ಮುಂಬಯಿ: ನಿರೀಕ್ಷೆಯಂತೆಯೇ ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಸ್ಪೀಕರ್ ನಾನಾ ಪಟೋಲೆ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಪಟೋಲೆ ಅವರು ಗುರುವಾರವಷ್ಟೇ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈವರೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಾಳಾ ಸಾಹೇಬ್ ಥೋರಟ್ ಅವರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಪ್ರದೇಶ ಕಾಂಗ್ರೆಸ್ ಸಮಿತಿಗೆ ಬಸವರಾಜ್ ಪಾಟೀಲ್, ಪ್ರಣತಿ ಸುಶೀಲ್ ಕುಮಾರ್ ಶಿಂಧೆ, ಮೊಹಮ್ಮದ್ ಆರೀಫ್ ನಸೀಮ್ ಖಾನ್ ಸೇರಿದಂತೆ ಆರು ಮಂದಿ ಕಾರ್ಯಾಧ್ಯಕ್ಷರು ಹಾಗೂ 10 ಮಂದಿ ಉಪಾಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಇದಲ್ಲದೇ 37 ಸದಸ್ಯರನ್ನು ಒಳಗೊಂಡ ಸಂಸದೀಯ ಸಮಿತಿಯನ್ನೂ ರಚಿಸಲಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಂತ್ರಗಾರಿಕೆ, ಪರಿಶೀಲನೆ ಮತ್ತು ಸಮನ್ವಯ ಸಮಿತಿಗಳನ್ನೂ ರಚಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ - ಎನ್ಸಿಪಿ - ಕಾಂಗ್ರೆಸ್ ಮೈತ್ರಿಕೂಟ ಸರಕಾರವಿದೆ. ಮಾರ್ಚ್ 1ರಂದು ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ.
ಈವರೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಾಳಾ ಸಾಹೇಬ್ ಥೋರಟ್ ಅವರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಪ್ರದೇಶ ಕಾಂಗ್ರೆಸ್ ಸಮಿತಿಗೆ ಬಸವರಾಜ್ ಪಾಟೀಲ್, ಪ್ರಣತಿ ಸುಶೀಲ್ ಕುಮಾರ್ ಶಿಂಧೆ, ಮೊಹಮ್ಮದ್ ಆರೀಫ್ ನಸೀಮ್ ಖಾನ್ ಸೇರಿದಂತೆ ಆರು ಮಂದಿ ಕಾರ್ಯಾಧ್ಯಕ್ಷರು ಹಾಗೂ 10 ಮಂದಿ ಉಪಾಧ್ಯಕ್ಷರನ್ನೂ ನೇಮಕ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ - ಎನ್ಸಿಪಿ - ಕಾಂಗ್ರೆಸ್ ಮೈತ್ರಿಕೂಟ ಸರಕಾರವಿದೆ. ಮಾರ್ಚ್ 1ರಂದು ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ.