ಆ್ಯಪ್ನಗರ

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚವಾಣ್‌ಗೆ ತಗುಲಿದ ಕೊರೊನಾ ವೈರಸ್ ಸೋಂಕು!

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಣ್ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಆದರೆ ಅಶೋಕ್ ಚವಾಣ್ ಅವರು ರೋಗ ಲಕ್ಷಣರಹಿತರಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

Vijaya Karnataka Web 25 May 2020, 3:46 pm
ಮುಂಬೈ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಣ್ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ.
Vijaya Karnataka Web Ashok Chavan
ಸಂಗ್ರಹ ಚಿತ್ರ


ಸದ್ಯ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಅಶೋಕ್ ಚವಾಣ್ ಅವರನ್ನು ಪರೀಕ್ಷೆಗೆ ಗುರಿಪಡಿಸಿದಾಗ ಕೊರೊನಾ ವೈರಸ್ ಪಾಸಿಟಿವ್ ಫಲಿತಾಂಶ ಬಂದಿದೆ.

ಕಾಂಗ್ರೆಸ್ ನಾಯಕ ಸಂಜಯ್ ಝಾ ಅವರಿಗೆ ಕೊರೊನಾ ಪಾಸಿಟಿವ್: ಶೀಘ್ರ ಚೇತರಿಕೆಗೆ ಗಣ್ಯರ ಪ್ರಾರ್ಥನೆ!

ಆದರೆ ಅಶೋಕ್ ಚವಾಣ್ ಅವರು ರೋಗ ಲಕ್ಷಣರಹಿತರಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆದರೆ ಚವಾಣ್ ಅವರಿಗೆ ಕೊರೊನಾ ಸೋಂಕು ಹೇಗೆ ತಗುಲಿತು ಎಂಬುದು ಇನ್ನೂ ದೃಢಪಟ್ಟಿಲ್ಲ.

ಸದ್ಯ ನಾಂದೇಡ್‌ನಲ್ಲಿರುವ ಅಶೋಕ್ ಚವಾಣ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಶೋಕ್ ಚವಾಣ್ ಕೊರೊನಾ ವೈರಸ್ ತಗುಲಿದ ಉದ್ಧವ್ ಠಾಕ್ರೆ ಸಚಿವ ಸಂಪುಟದ ಎರಡನೇ ಸಚಿವರಾಗಿದ್ದಾರೆ.

ಓವರ್ ಕಾನ್ಫಿಡೆನ್ಸ್‌ನಿಂದಾಗಿ ಕೊರೊನಾ ಸೋಂಕು ತಗುಲಿತು: ಸಚಿವರ ಸತ್ಯ ನುಡಿಗಳು!

ಈ ಹಿಂದೆ ಜಿತೇಂದ್ರ ಔಹಾದ್ ಅವರಿಗೂ ಮಾರಕ ಕೊರೊನಾ ವೈರಸ್ ಸೋಂಕು ತಗುಲಿತ್ತು. ಆದರೆ ಸೂಕ್ತ ಚಿಕಿತ್ಸೆ ಬಳಿಕ ಔಹಾದ್ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ