ಆ್ಯಪ್ನಗರ

ಎನ್‌ಸಿಪಿ ಜೊತೆ ಮುನಿಸು?; ಶಿವಸೇನೆ ಸಂಸದ ಸಂಜಯ್ ಜಾಧವ್ ರಾಜೀನಾಮೆ!

​​ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ, ಎಂದು ಹೇಳಿರುವ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದು, ಪತ್ರ ರವಾನಿಸಿದ್ದಾರೆ. ಈ ಮೂಲಕ ಶಿವಸೇನೆ ಹಾಗೂ ಎನ್‌ಸಿಪಿಯ ಮೈತ್ರಿ ಬಗ್ಗೆ ಶಿವಸೇನೆಯ ನಾಯಕರಲ್ಲಿ ಅಸಮಾಧಾನ ಇದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

Agencies 27 Aug 2020, 8:26 am
ಮುಂಬೈ: ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಜಾಧವ್, ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ.
Vijaya Karnataka Web EgXyz2CUMAYH0X2


ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ, ಎಂದು ಹೇಳಿರುವ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದು, ಪತ್ರ ರವಾನಿಸಿದ್ದಾರೆ. ಈ ಮೂಲಕ ಶಿವಸೇನೆ ಹಾಗೂ ಎನ್‌ಸಿಪಿಯ ಮೈತ್ರಿ ಬಗ್ಗೆ ಶಿವಸೇನೆಯ ನಾಯಕರಲ್ಲಿ ಅಸಮಾಧಾನ ಇದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.


'ಪರಭಾನಿಯ ಜಿಂತೂರ್ ಎಪಿಎಂಸಿಯ ಆಡಳಿತಾಧಿಕಾರಿಗಳ ನೇಮಕ ಕುರಿತು ನಾನು ಕಳೆದ 8-10 ತಿಂಗಳಿಂದ ಪ್ರಯತ್ನ ನಡೆಸುತ್ತಾ ಬಂದಿದ್ದೇನೆ. ಈಗ ಎನ್‌ಸಿಪಿಯ ವ್ಯಕ್ತಿಯೊಬ್ಬರನ್ನು ಸರ್ಕಾರೇತರ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದು ಶಿವಸೇನೆ ಕಾರ್ಯಕರ್ತರಿಗೆ ಮಾಡಿದ ಅವಮಾನ' ಎಂದು ತಿಳಿಸಿರುವ ಜಾಧವ್‌, ನನ್ನ ಕ್ಷೇತ್ರದ ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದಮೇಲೆ ಸಂಸದನಾಗಿರಲು ನನಗೆ ಯಾವುದೇ ಹಕ್ಕಿಲ್ಲ.

ಸಂಸತ್‌ ಭವನದ ಬಳಿ ಶಂಕಿತನ ಬಂಧನ: 2 ಡಿಲ್‌, ಕೋಡ್‌ವರ್ಡ್‌ ಚೀಟಿ ವಶಕ್ಕೆ!

ಆದ್ದರಿಂದ, ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜೊತೆಗೂಡಿ ಸರಕಾರ ರಚಿಸುತ್ತಿದೆ. ಆರಂಭದಿಂದಲೆ ಮೈತ್ರಿಯಲ್ಕಿ ಬಿರುಕು ಮೂಡುತ್ತಿತ್ತು. ಇದೀಗ ಮತ್ತೆ ಅಸಮಾಧಾನ ಭುಗಿಲೆದ್ದಂತೆ ಕಾಣುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ