ಆ್ಯಪ್ನಗರ

Uddhav Thackeray Resigns : ವಿಶ್ವಾಸಮತಕ್ಕೂ ಮುನ್ನವೇ ರಾಜೀನಾಮೆ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸದನದಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲರ ಸೂಚನೆಯಂತೆ ಗುರುವಾರ (ಜೂನ್‌ 30)ದಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸದನದಲ್ಲಿ ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

Edited byಬಾನುಪ್ರಸಾದ ಕೆ.ಎನ್\u200c. | Vijaya Karnataka Web 30 Jun 2022, 11:18 am
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸದನದಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲರ ಸೂಚನೆಯಂತೆ ಗುರುವಾರ (ಜೂನ್‌ 30)ದಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸದನದಲ್ಲಿ ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅಲ್ಲದೇ ಜೈಲಿನಲ್ಲಿರುವ ಎನ್‌ಸಿಪಿ ನಾಯಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶ್‌ಮುಖ್‌ ಅವರಿಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿತ್ತು. ಆದರೀಗ ವಿಶ್ವಸಮತಕ್ಕೂ ಮೊದಲೇ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿ ಕೈಚೆಲ್ಲಿದ್ದಾರೆ.
Vijaya Karnataka Web Uddhav Thackeray
In an address to the people on Facebook, Thackeray also expressed gratitude to NCP and Congress parties for supporting him.


ಕೋರ್ಟ್‌ ಹೇಳಿದ್ದೇನು?
ಗುರುವಾರ ಸಂಜೆ 5 ಗಂಟೆಯ ಒಳಗಾಗಿ ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಶಿವಸೇನೆಯ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ಈ ರೀತಿಯಾಗಿ ಹೇಳಿದೆ.

ಉದ್ಧವ್ ಠಾಕ್ರೆ ಸರ್ಕಾರ ಅಲ್ಪಮತಕ್ಕೆ ಜಾರಿದೆ. ಹೀಗಾಗಿ ಗುರುವಾರ ಸಂಜೆ ಐದು ಗಂಟೆಯ ಒಳಗಾಗಿ ವಿಶ್ವಾಸಮತ ಸಾಬೀತು ಮಾಡಬೇಕು ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೊಶ್ಯಾರಿ ಆದೇಶ ನೀಡಿದ್ದರು. ಇದನ್ನು ಪ್ರಶ್ನೆ ಮಾಡಿ ಶಿವಸೇನೆಯ ಮುಖ್ಯಸಚೇತ ಸುನಿಲ್‌ ಪ್ರಭು ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜೆಬಿ ಪರ್ಡಿವಾಲ ಅವರಿದ್ದ ರಜಾಕಾಲದ ದ್ವಿಸದಸ್ಯ ಪೀಠ, ರಾಜ್ಯಪಾಲರ ಸೂಚನೆಯಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ವಿಶ್ವಾಸಮತ ಯಾಚನೆಯ ಫಲಿತಾಂಶವು ಸುಪ್ರೀಂ ಕೋರ್ಟ್ ಪ್ರಕರಣದ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ಪೀಕರ್ ಮತ್ತು ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಜುಲೈ 11 ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತ್ತು.

Maharashtra Crisis: ರಾಜ್ಯಪಾಲರು ರಫೇಲ್ ಜೆಟ್‌ಗಿಂತಲೂ ವೇಗ: ಬಹುಮತ ಆದೇಶಕ್ಕೆ ಸಂಜಯ್ ರಾವತ್ ವ್ಯಂಗ್ಯ

ಶಿವಸೇನೆಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ, ಗುರುವಾರವೇ ವಿಶ್ವಾಸಮತ ಸಾಬೀತು ಪಡಿಸಿದ್ದರೆ ಸ್ವರ್ಗವೇನೂ ಬಿದ್ದು ಹೋಗುವುದಿಲ್ಲ. ಜುಲೈ 11ರ ವರೆಗೆ ಶಾಸಕರನ್ನು ಅನರ್ಹತೆ ಮಾಡಕೂಡದು ಎಂದು ಮಧ್ಯದ್ಯಂತ ಆದೇಶ ಇದೆ. ಈವರೆಗೆ ಯಾಕೆ ಮುಂದೂಡಬಾರದು ಎಂದು ಸಿಂಘ್ವಿ ಕೋರಿಕೊಂಡರು.

ಒಂದು ವೇಳೆ ಶಾಸಕರನ್ನು ಅನರ್ಹತೆ ಮಾಡಿದ್ದೇ ಆದಲ್ಲಿ, ಅನರ್ಹತೆ ನೋಟಿಸ್‌ ನೀಡಿದ ದಿನದಿಂದ ಅವರು ಅನರ್ಹರಾಗುತ್ತಾರೆ. ಗುರುವಾರ ವಿಶ್ವಾಸಮತ ಯಾಚನೆ ನಡೆದು, ಬಳಿಕ ಅವರು ಅನರ್ಹರಾದರೆ, ವಿಶ್ವಾಸ ಮತ ಯಾಚನೆ ವೇಳೆ ಅವರು ಸದನದ ಸದಸ್ಯರಾಗಿರುವುದಿಲ್ಲ. ಇದು ಸಂವಿಧಾನದ ಧ್ಯೇಯೋದ್ದೇಶಗಳಿಗೆ ವಿರುದ್ಧವಾಗಿದ್ದು ಎಂದು ಸಿಂಘಿ ವಾದಿಸಿದರು.

Maharashtra Crisis- 52 ಶಾಸಕರನ್ನು ಬಿಟ್ಟರೂ ಪವಾರ್‌ ಅವರನ್ನು ಬಿಟ್ಟಿಲ್ಲ: ಉದ್ಧವ್‌ ವಿರುದ್ಧ ಬಂಡಾಯ ಶಾಸಕರ ಅಸಮಾಧಾನ

ಏಕನಾಥ ಶಿಂಧೆ ಪರ ವಾದ ಮಂಡಿಸಿದ ಮತ್ತೋರ್ವ ಹಿರಿಯ ವಕೀಲ ನೀರಕ್‌ ಕಿಶನ್‌ ಕೌಲ್‌, ಅನರ್ಹತೆಗೆಗೂ ವಿಶ್ವಾಸಮತ ಸಾಬೀತು ಪಡಿಸುವುದಕ್ಕೂ ಸಂಬಂಧ ಇಲ್ಲ. ಸುಪ್ರಿಂ ಕೋರ್ಟ್‌ನ ಈ ಹಿಂದಿನ ತೀರ್ಪುಗಳು ಯಾವುದೂ ಇದಕ್ಕೆ ವಿರುದ್ಧವಾಗಿಲ್ಲ. ಉದ್ಧವ್‌ ಠಾಕ್ರೆ ಬಣಕ್ಕೆ ವಿಧಾನಸಭೆಯಲ್ಲಿ ಅಲ್ಲ. ಪಕ್ಷದಲ್ಲೇ ಬಹುಮತ ಇಲ್ಲ. ಪ್ರಜಾಪ್ರಭುತ್ವ ಸಂಭ್ರಮಿಸಬೇಕಾಗಿದ್ದು, ವಿಧಾನಸಭೆಯಲ್ಲಿ. ಅದನ್ನೇ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕೌಲ್‌ ಹೇಳಿದರು.
ಲೇಖಕರ ಬಗ್ಗೆ
ಬಾನುಪ್ರಸಾದ ಕೆ.ಎನ್\u200c.
ವಿಜಯ ಕರ್ನಾಟಕ ಡಿಜಿಟಲ್\u200c ಪತ್ರಕರ್ತ. ವಿಜ್ಞಾನ ತಂತ್ರಜ್ಞಾನ, ರಾಷ್ಟ್ರೀಯ- ಅಂತಾರಾಷ್ಟ್ರೀಯ, ಸಾಹಿತ್ಯ-ಕಲೆ, ಶಿಕ್ಷಣ, ಆಸಕ್ತಿಯ ವಿಷಯಗಳು... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ