ಆ್ಯಪ್ನಗರ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಧಾರಾಕಾರ ಮಳೆ: ರಸ್ತೆಗಳಲ್ಲಿ ಪ್ರವಾಹ ಸನ್ನಿವೇಶ!

ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕುಂಭದ್ರೋಣ ಮಳೆಗೆ ನಗರದ ರಸ್ತೆಗಳಲ್ಲಿ ಪ್ರವಾಹದ ಸನ್ನಿವೇಶ ಏರ್ಪಟ್ಟಿದೆ. ಭಾರೀ ಮಳೆಯ ಕಾರಣಕ್ಕೆ ಮನೆಗಳಿಂದ ಹೊರ ಬರದಂತೆ ಬೃಹತ್ ಮುಂಬೈ ಮಹಾನಗರ ಪಾಲಿಕೆ ಜನರಲ್ಲಿ ಮನವಿ ಮಾಡಿದೆ.

Vijaya Karnataka Web 15 Jul 2020, 2:06 pm
ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕುಂಭದ್ರೋಣ ಮಳೆಗೆ ನಗರದ ರಸ್ತೆಗಳಲ್ಲಿ ಪ್ರವಾಹದ ಸನ್ನಿವೇಶ ಏರ್ಪಟ್ಟಿದೆ.
Vijaya Karnataka Web Mumbai Rain
ಮುಂಬೈಯಲ್ಲಿ ಭಾರೀ ಮಳೆ


ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಗರದ ಪ್ರಮುಖ ರಸ್ತೆಗಳೆಲ್ಲಾ ನೀರಿನಿಂದ ತುಂಬಿ ಹೋಗಿದ್ದು, ಜನ ಸಂಚಾರ ತೀರ ವಿರಳವಾಗಿದೆ.

ಇನ್ನು ಭಾರೀ ಮಳೆಯ ಕಾರಣಕ್ಕೆ ಮನೆಗಳಿಂದ ಹೊರ ಬರದಂತೆ ಜನರಲ್ಲಿ ಮನವಿ ಮಾಡಿರುವ ಬೃಹತ್ ಮುಂಬೈ ಮಹಾನಗರ ಪಾಲಿಕೆ, ನೀರಿನ ಸೆಳೆತ ಅಧಿಕವಾಗಿರುವ ಪ್ರದೇಶಗಳಲ್ಲಿ ಓಡಾಡದಂತೆ ಎಚ್ಚರಿಕೆ ನೀಡಿದೆ.

ಕೊಡಗಿನಲ್ಲಿ ಮುಂಗಾರು ಮಳೆ ಅಬ್ಬರ: ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ

ಪ್ರಮುಖವಾಗಿ ಮಕ್ಕಳು ಹೊರಗಡೆ ನೀರಿನಲ್ಲಿ ಆಟವಾಡದಂತೆ ನಿಗಾ ವಹಿಸುವಂತೆ ಮನವಿ ಮಾಡಲಾಗಿದ್ದು, ವಾಹನ ಸವಾರರು ತುಂಬ ಎಚ್ಚರಿಕೆಯಿಂದ ವಾಹನಗಳನ್ನು ಓಡಿಸುವಂತೆ ಸಲಹೆ ನೀಡಲಾಗಿದೆ.


ಈಗಾಗಲೇ ಮಹಾನಗರ ಪಾಲಿಕೆ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದು, ರಸ್ತೆಗಳಲ್ಲಿ ನಿಂತಿರುವ ನೀರನ್ನು ತೆರವುಗೊಳಿಸುವಲ್ಲಿ ನಿರತರಾಗಿದ್ದಾರೆ. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆ ಕಾರ್ಯಾಚರಣೆಗೆ ಅಡ್ಡಿಯುಂಟು ಮಾಡಿದೆ.

ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ: ಮೂರು ದಿನ ಆರೆಂಜ್‌ ಅಲರ್ಟ್‌!

ಮಾರಕ ಕೊರೊನಾ ವೈರಸ್ ಹರಡುವಿಕೆಯಿಂದ ಕಂಗೆಟ್ಟಿರುವ ಮುಂಬೈ ನಿವಾಸಿಗಳು, ಇದೀಗ ಭಾರೀ ಮಳೆಯನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ