ಆ್ಯಪ್ನಗರ

ಮಹಾರಾಷ್ಟ್ರದಲ್ಲಿ ಎನ್‌ಪಿಆರ್‌ಗೆ ನಿರ್ಬಂಧ ಇಲ್ಲ: ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ

ಎನ್‌ಆರ್‌ಸಿಯನ್ನು ನಮ್ಮಲ್ಲಿ ಜಾರಿಗೆ ತರುವುದಿಲ್ಲ. ಈ ವಿಷಯದಲ್ಲಿ ಯಾರಿಗೂ ಭಯ ಬೇಡ. ಎನ್‌ಆರ್‌ಸಿಯಿಂದ ಹಿಂದೂಗಳು, ಮುಸ್ಲಿಮರು ಹಾಗೂ ಆದಿವಾಸಿಗಳ ಮೇಲೂ ಪರಿಣಾಮ ಬೀರಲಿದೆ ಎಂದು ಮಹಾ ಸಿಎಂ ತಿಳಿಸಿದರು.

Vijaya Karnataka Web 18 Feb 2020, 7:43 pm
ಮುಂಬಯಿ: ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ (ಎನ್‌ಪಿಆರ್‌) ನಿರ್ಬಂಧ ಹೇರುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಉದ್ಧವ್‌ ಠಾಕ್ರೆ
ಉದ್ಧವ್‌ ಠಾಕ್ರೆ


ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತನಾಡಿದರು.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯಿದೆ ಬೇರೆ, ರಾಷ್ಟ್ರೀಯ ನಾಗರಿಕ ನೋಂದಣಿ ಬೇರೆ, ಜನಸಂಖ್ಯಾ ನೋಂದಣಿ ಬೇರೆ ಎಂದು ಉದ್ಧವ್‌ ಠಾಕ್ರೆ ಹೇಳಿದರು.

ಎನ್‌ಪಿಆರ್‌ನಲ್ಲಿ ವೈಯಕ್ತಿಕ ಕಲಂಗಳನ್ನು ಪರಿಶೀಲಿಸುತ್ತಾರೆ. ಮಹಾರಾಷ್ಟ್ರದಲ್ಲಿ ಇದಾವ ಸಮಸ್ಯೆಗೆ ಕಾರಣವಾಗುವುದಿಲ್ಲ ಎಂದು ತಿಳಿಸಿದರು.

ಎನ್‌ಆರ್‌ಸಿಯನ್ನು ನಮ್ಮಲ್ಲಿ ಜಾರಿಗೆ ತರುವುದಿಲ್ಲ. ಈ ವಿಷಯದಲ್ಲಿ ಯಾರಿಗೂ ಭಯ ಬೇಡ. ಎನ್‌ಆರ್‌ಸಿಯಿಂದ ಹಿಂದೂಗಳು, ಮುಸ್ಲಿಮರು ಹಾಗೂ ಆದಿವಾಸಿಗಳ ಮೇಲೂ ಪರಿಣಾಮ ಬೀರಲಿದೆ ಎಂದು ಮಹಾ ಸಿಎಂ ತಿಳಿಸಿದರು.

ಎನ್‌ಪಿಆರ್‌ ಜನಗಣತಿಯಷ್ಟೇ. ಅದು ಪ್ರತಿ 10 ವರ್ಷಗಳಿಗೊಮ್ಮೆ ನಡೆಯುವ ಜನಗಣನಿ. ಅದರಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಉದ್ಧವ್‌ ಠಾಕ್ರೆ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ