ಆ್ಯಪ್ನಗರ

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು: ಕರ್ನಾಟಕ ಆಕ್ರಮಿತ ಪ್ರದೇಶ ಎನ್ನುವ ಮೂಲಕ ಠಾಕ್ರೆ ಮತ್ತೆ ವಿವಾದ

​​ಸಿಎಂ ಉದ್ಧವ್‌ ಟ್ವೀಟ್‌ನಿಂದ ಗಡಿ ವಿವಾದ ಮತ್ತೆ ಚರ್ಚೆಗೆ ಬಂದಿದೆ. ಎಂಇಎಸ್‌ ಮತ್ತಿತರ ಸಂಘಟನೆಗಳು ಪ್ರತಿವರ್ಷ ಜ.17 ಅನ್ನು 'ಮರಾಠಾ ಹುತಾತ್ಮರ ದಿನವಾಗಿ ಆಚರಿಸುತ್ತವೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರಕಾರ ಹಲವು ವರ್ಷಗಳಿಂದ ಹೇಳುತ್ತ ಬಂದಿದೆ. ಎರಡೂ ರಾಜ್ಯಗಳ ನಡುವಿನ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ.

Vijaya Karnataka Web 18 Jan 2021, 10:46 am
ಮುಂಬಯಿ: ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಘೋಷಿಸಿದ್ದಾರೆ. 'ಮರಾಠಾ ಹುತಾತ್ಮರ ದಿನ'ವಾದ ಭಾನುವಾರ (ಜ.17) ಈ ಸಂಬಂಧ ಟ್ವೀಟ್‌ ಮಾಡಿದ್ದು, ''ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ನಿಜವಾದ ಗೌರವ,'' ಎಂದು ಹೇಳಿದ್ದಾರೆ.
Vijaya Karnataka Web uddhav thackarey
Maharashtra chief minister Uddhav Thackrey



''ಮರಾಠಾ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಹಾಗೂ ಇತರ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು. ಈ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಈ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸುತ್ತೇವೆ'' ಎಂದೂ ಠಾಕ್ರೆ ತಿಳಿಸಿದ್ದಾರೆ.



ಸಿಎಂ ಉದ್ಧವ್‌ ಠಾಕ್ರೆ ಟ್ವೀಟ್‌ನಿಂದ ಗಡಿ ವಿವಾದ ಮತ್ತೆ ಚರ್ಚೆಗೆ ಬಂದಿದೆ. ಎಂಇಎಸ್‌ ಮತ್ತಿತರ ಸಂಘಟನೆಗಳು ಪ್ರತಿವರ್ಷ ಜ.17 ಅನ್ನು 'ಮರಾಠಾ ಹುತಾತ್ಮರ ದಿನವಾಗಿ ಆಚರಿಸುತ್ತವೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರಕಾರ ಹಲವು ವರ್ಷಗಳಿಂದ ಹೇಳುತ್ತ ಬಂದಿದೆ. ಎರಡೂ ರಾಜ್ಯಗಳ ನಡುವಿನ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ.

ವಾಟ್ಸಾಪ್‌ ಚಾಟ್‌ ಸೋರಿಕೆಯಾದ ಬೆನ್ನಲ್ಲೇ ಮಾಜಿ ಬಾರ್ಕ್‌ ಸಿಇಒ ದಾಸ್‌ಗುಪ್ತಾ ಐಸಿಯುಗೆ ದಾಖಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ