ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಿಎಸ್ಎನ್ಎಲ್ ನಾನ್ ಪರ್ಮನೆಂಟ್ ನೌಕರರ ಸಂಘದ ವತಿಯಿಂದ ಮಂಗಳವಾರ ಜಯಲಕ್ಷ್ಮೇಪುರಂನ ಜಿಎಂ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
''ಕನಿಷ್ಠ ಸಂಬಳ 18 ಸಾವಿರ ರೂ. ನಿಗದಿ ಮಾಡಬೇಕು. ಗುತ್ತಿಗೆ ಕಾರ್ಮಿಕರನ್ನು ಕಾಯಂ ಮಾಡಬೇಕು. ತೆಗೆದು ಹಾಕಿರುವ ಕೆಲಸಗಾರರನ್ನು ಮರು ನೇಮಕ ಮಾಡಬೇಕು. ಇಎಸ್ಐ, ಪಿಎಫ್ ಸೌಲಭ್ಯವನ್ನು ನೀಡಬೇಕು. ಬಿಎಸ್ಎನ್ಎಲ್ ಸಂಸ್ಥೆಯಿಂದ ಗುರುತಿನ ಚೀಟಿ ನೀಡಬೇಕು'' ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಲಿಂಗು, ಪದಾಧಿಕಾರಿಗಳು ಇದ್ದರು.