ಆ್ಯಪ್ನಗರ

ದಡಾರ, ರುಬೆಲ್ಲಾ ಲಸಿಕೆ ಹಾಕಿಸಿ

ಪೋಷಕರು ತಮ್ಮ ಮಕ್ಕಳ ಆರೋಗ್ಯದ ಹಿತದಷ್ಟಿಯಿಂದ ಕಡ್ಡಾಯವಾಗಿ ದಡಾರ ಮತ್ತು ರುಬೆಲ್ಲಾ ಲಸಿಕೆಗಳನ್ನು ಹಾಕಿಸಲು ಮುಂದಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾವತಿ ತಿಳಿಸಿದರು.

Vijaya Karnataka Web 2 Feb 2017, 5:12 am
ನಂಜನಗೂಡು: ಪೋಷಕರು ತಮ್ಮ ಮಕ್ಕಳ ಆರೋಗ್ಯದ ಹಿತದಷ್ಟಿಯಿಂದ ಕಡ್ಡಾಯವಾಗಿ ದಡಾರ ಮತ್ತು ರುಬೆಲ್ಲಾ ಲಸಿಕೆಗಳನ್ನು ಹಾಕಿಸಲು ಮುಂದಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾವತಿ ತಿಳಿಸಿದರು.
Vijaya Karnataka Web
ದಡಾರ, ರುಬೆಲ್ಲಾ ಲಸಿಕೆ ಹಾಕಿಸಿ

ಅವರು ನಂಜನಗೂಡಿನ ನಗರದ ಕಾರ್ಮೆಲ್ ಆಂಗ್ಲಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ದಡಾರ ಮತ್ತು ರುಬೆಲ್ಲಾ ಲಸಿಕೆ ಜಾಗತಿ ಶಿಬಿರದಲ್ಲಿ ಮಾತನಾಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಿಂದ 9 ತಿಂಗಳ ವಯೋಮಿತಿಯಿಂದ 15ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ಸರಕಾರಿ ಆಸ್ಪತ್ರೆಗಳು,ಅಂಗನವಾಡಿ ಕೇಂದ್ರಗಳು, ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಫೆ. 7ರಿಂದ 28ರವರೆಗೆ ಉಚಿತವಾಗಿ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಕೊಡಿಸುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಇನ್ನು ನಂಜನಗೂಡು ತಾಲೂಕಿನಲ್ಲಿ 15 ವರ್ಷ ವಯೋಮಿತಿಯೊಳಗೆ 73,912 ಮಕ್ಕಳಿದ್ದು, ಈ ಪೈಕಿ 53,593 ಮಂದಿ ಮಕ್ಕಳು ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಉಳಿದ 20319 ಮಂದಿ ಮಕ್ಕಳ ಪೈಕಿ ಕೆಲವರು ಅಂಗನವಾಡಿಗೆ ದಾಖಲಾಗಿದ್ದು, ಇನ್ನೂ ಕೆಲವರು ಶಾಲೆಯಿಂದ ಹೊರಗುಳಿದಿದ್ದಾರೆ. ಈ ಎಲ್ಲರಿಗೂ ಲಸಿಕೆ ನೀಡುವ ಸಲುವಾಗಿ ತಾಲೂಕಿನಲ್ಲಿ 480 ಕೇಂದ್ರಗಳನ್ನು ತೆರೆಯಲಾಗಿದೆ. ನಿಗಧಿತ ಕಾಲಾವಧಿಯೊಳಗೆ ಶೇ.100ರ ಗುರಿ ಸಾಧಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ದೇಶ ಪೋಲಿಯೋ ರೋಗದಿಂದ ಮುಕ್ತವಾಗಿದ್ದು, ಮುಂಬರುವ ದಿನಗಳಲ್ಲಿ ಮಾರಕ ರೋಗಗಳಾದ ರುಬೆಲ್ಲಾ ಮತ್ತು ದಡಾರದಿಂದ ಮಕ್ಕಳನ್ನು ರಕ್ಷಿಸುವ ಸಲುವಾಗಿ ರೋಗ ನಿರೋಧಕ ಲಸಿಕೆ ವಿತರಣೆಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ‌್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಹೇಶ್, ಬಿಆರ್‌ಸಿ ಅರ್ಪಣ, ರಂಗನಾಥ್ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ