ನಂಜನಗೂಡು: ಮತದಾರರು ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜರುಗಿರುವ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ ಹೀಗಾಗಿ ಉಪ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಿಕ್ಷ ಣ ಸಚಿವ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ತಾಲೂಕಿನ ದೊಡ್ಡ ಕವಲಂದೆ, ಚಿಕ್ಕ ಕವಲಂದೆ ಹಾಗೂ ಮಹದೇವ ನಗರ ವ್ಯಾಪ್ತಿಯಲ್ಲಿ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದರು.
ಅನವಶ್ಯಕವಾಗಿ ಎದುರಾಗಿರುವ ಉಪಚುನಾವಣೆಯಲ್ಲಿ ಜನರು ಅಭಿವೃದ್ಧಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅತ್ಯಧಿಕ ಬಹುಮತಗಳಿಂದ ವಿಜೇತರಾಗಲಿದ್ದಾರೆ ಎಂದು ಹೇಳಿದರು.
ನಂತರ ಸಚಿವ ತನ್ವೀರ್ ಸೇಠ್ ದೇವನೂರು ಮಠಕ್ಕೆ ತೆರಳಿ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠಾಧ್ಯಕ್ಷ ಮಹಾಂತಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ಕೆಪಿಸಿಸಿ ಸದಸ್ಯ ಅಕ್ಬರ್ ಅಲೀಮ್, ಅಜಂಖಾನ್,ಖಲೀಲ್,ಮೂಡಾ ಮಾಜಿ ಸದಸ್ಯ ಅನ್ವರ್ ಪಾಷ ಇದ್ದರು.