ಮೈಸೂರು: ನಾಡ ಹಬ್ಬ ಮೈಸೂರು ದಸರಾಕ್ಕೆ ರಾಜ್ಯ ಸರಕಾರ 18.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ 18.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಮೈಸೂರು ಜಿಲ್ಲಾಧಿಕಾರಿ ಅವರ ಖಾತೆಗೆ 18.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ.ಎಸ್.ಮಾಲತಿ ಆದೇಶ ನೀಡಿದ್ದಾರೆ. ಬಿಡುಗಡೆಯಾಗುವ ಹಣವನ್ನು ದಸರಾಕ್ಕೆ ಸಂಬಂಧಪಟ್ಟ ಕಾರ್ಯಗಳಿಗೆ ಮಾತ್ರ ಬಳಸುವಂತೆ, ವೆಚ್ಚದ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ 18.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಮೈಸೂರು ಜಿಲ್ಲಾಧಿಕಾರಿ ಅವರ ಖಾತೆಗೆ 18.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ.ಎಸ್.ಮಾಲತಿ ಆದೇಶ ನೀಡಿದ್ದಾರೆ. ಬಿಡುಗಡೆಯಾಗುವ ಹಣವನ್ನು ದಸರಾಕ್ಕೆ ಸಂಬಂಧಪಟ್ಟ ಕಾರ್ಯಗಳಿಗೆ ಮಾತ್ರ ಬಳಸುವಂತೆ, ವೆಚ್ಚದ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.