ಆ್ಯಪ್ನಗರ

500 ಕೋಟಿ ರೂ. ನೋಟು ಬದಲಾವಣೆ ದಂಧೆ: ಎಫ್ಐಆರ್ ದಾಖಲು

ಈ ಕುರಿತು ಇನ್ಸ್ ಪೆಕ್ಟರ್ ಕುಮಾರ್ ವಿಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಖಚಿತ ಮಾಹಿತಿಯಂತೆ ಸಿಬ್ಬಂದಿಯೊಂದಿಗೆ ಆರೋಪಿಗಳನ್ನು ಸುತ್ತುವರಿದಾಗ ನಮ್ಮ ಮೇಲೆ ದಾಳಿ ನಡೆಸಿದರು. ನಮ್ಮ ಮೇಲೆಯೇ ಗುಂಡು ಹಾರಿಸಲು ಪ್ರಯತ್ನಿಸಿದಾಗ ಸಿಬ್ಬಂದಿಯ ಹಾಗೂ ತನ್ನ ಆತ್ಮರಕ್ಷಣೆಗೆ ಗುಂಡು ಹಾರಿಸಬೇಕಾಯಿತು ಎಂದು ಹೇಳಿದ್ದಾರೆ.

Vijaya Karnataka Web 17 May 2019, 3:58 pm
ಮೈಸೂರು: ಮೈಸೂರಿನಲ್ಲಿ ನಿನ್ನೆ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದ್ದು, 500 ಕೋಟಿ ರೂ. ಅಮಾನ್ಯೀಕರಣಗೊಂಡ ನೋಟುಗಳ ಬದಲಾವಣೆ ದಂಧೆ ಇದು ಎಂದು ಪೊಲೀಸರು ತಿಳಿಸಿದ್ದಾರೆ.
Vijaya Karnataka Web Shootout place


ಮೈಸೂರಿನ ವಿಜಯ ನಗರದ ಅಪಾರ್ಟ್‌ಮೆಂಟ್ ಬಳಿ ವಿಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಜಿ. ಕುಮಾರ್ ಹಾರಿಸಿದ ಗುಂಡಿಗೆ ಗ್ಯಾಂಗ್ ಸ್ಟರ್ ಎಂದು ಹೇಳಲಾಗುವ ಸುಖವೇಂದ್ರ ಸಿಂಗ್ ಬಲಿಯಾಗಿದ್ದ. ಜೊತೆಯಲ್ಲಿದ್ದ ಇನ್ನಿಬ್ಬರು ಪರಾರಿಯಾಗಿದ್ದರು.

ಈ ಕುರಿತು ಇನ್ಸ್ ಪೆಕ್ಟರ್ ಕುಮಾರ್ ವಿಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಖಚಿತ ಮಾಹಿತಿಯಂತೆ ಸಿಬ್ಬಂದಿಯೊಂದಿಗೆ ಆರೋಪಿಗಳನ್ನು ಸುತ್ತುವರಿದಾಗ ನಮ್ಮ ಮೇಲೆ ದಾಳಿ ನಡೆಸಿದರು. ನಮ್ಮ ಮೇಲೆಯೇ ಗುಂಡು ಹಾರಿಸಲು ಪ್ರಯತ್ನಿಸಿದಾಗ ಸಿಬ್ಬಂದಿಯ ಹಾಗೂ ತನ್ನ ಆತ್ಮರಕ್ಷಣೆಗೆ ಗುಂಡು ಹಾರಿಸಬೇಕಾಯಿತು ಎಂದು ಹೇಳಿದ್ದಾರೆ.

ಪ್ರಕರಣದ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಪರಾರಿಯಾದ ಇನ್ನಿಬ್ಬರ ಹುಡುಕಾಟ ನಡೆಯುತ್ತಿದೆ. ಪ್ರಕರಣದ ಹಿಂದಿನ ರಹಸ್ಯವನ್ನು ಬಯಲು ಮಾಡಲು ವಿಶೇಷ ತಂಡ ರಚನೆ ಮಾಡಲಾಗಿದೆ. ಸುಮಾರು 500 ಕೋಟಿ ರೂ. ಮೊತ್ತದ ನೋಟು ಬದಲಾವಣೆ ಮೈಸೂರಿನಲ್ಲಿ ನಡೆಯುತ್ತಿದ್ದ ಶಂಕೆ ಇದೆ ಎಂದು ಎಫ್ ಐಆರ್ ನಲ್ಲಿ ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ