ಆ್ಯಪ್ನಗರ

ಅಸಹಜ ಲೈಂಗಿಕ ಕ್ರಿಯೆಗೆ ಒಪ್ಪದ ವ್ಯಕ್ತಿ ಮೇಲೆ ಹಲ್ಲೆ: 6 ಮಂದಿ ಸೆರೆ

ಅಸಹಜ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಲು ಒಪ್ಪದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ನಾಲ್ವರು ಮಂಗಳಮುಖಿಯರು ಸೇರಿದಂತೆ ಆರು ಮಂದಿಯನ್ನು ಲಷ್ಕರ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijaya Karnataka 24 Apr 2019, 5:00 am
ಮೈಸೂರು : ಅಸಹಜ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಲು ಒಪ್ಪದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ನಾಲ್ವರು ಮಂಗಳಮುಖಿಯರು ಸೇರಿದಂತೆ ಆರು ಮಂದಿಯನ್ನು ಲಷ್ಕರ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web 6 persons arrested in connection with abusive sex acts
ಅಸಹಜ ಲೈಂಗಿಕ ಕ್ರಿಯೆಗೆ ಒಪ್ಪದ ವ್ಯಕ್ತಿ ಮೇಲೆ ಹಲ್ಲೆ: 6 ಮಂದಿ ಸೆರೆ


ತೌಸೀಫ್‌, ರವೀಂದ್ರಕುಮಾರ್‌, ಮಂಗಳಮುಖಿಯರಾದ ವಸೀಂ, ಅಮೃತಾ, ಅರುಣಾ, ಶ್ರಾವಣಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಏ.20ರಂದು ಶನಿವಾರ ಮಿಲಾದ್‌ ಉದ್ಯಾನದ ಬಳಿ ಹೋಗುತ್ತಿದ್ದಾಗ 6 ಮಂದಿ ಹೊಡೆದು ಗಾಯಗೊಳಿಸಿದ್ದಾಗಿ ಮುಸ್ತಫ ದೂರು ನೀಡಿದ್ದರು. ಅನುಮಾನಗೊಂಡ ಪೊಲೀಸರು ಮುಸ್ತಫ ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ತನ್ನ ಮೇಲೆ ತೃತೀಯ ಲಿಂಗಿ ಸ್ನೇಹಿತರಾದ ನಗೀನಾ ಮತ್ತು ಅವರ ಸಹಚರರು ಹಲ್ಲೆ ನಡೆಸಿದ್ದಾಗಿ ಹೇಳಿಕೆ ನೀಡಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

''ಅಸಹಜ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಲು ಒಪ್ಪದೇ ಇದ್ದುದ್ದರಿಂದ ಮುಸ್ತಫ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿದ್ದಾರೆ,'' ಎಂದು ಪೊಲೀಸರು ತಿಳಿಸಿದ್ದಾರೆ. ಲಷ್ಕರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ ಮುನಿಯಪ್ಪ, ಎಸ್‌ಐ ಪೂಜಾ, ಎಎಸ್‌ಐ ವೆಂಕಟಾಚಲನಾಯಕ, ಸಿಬ್ಬಂದಿಯಾದ ಪರಶಿವಮೂರ್ತಿ, ಮಂಜುಳಾ, ಚಿನ್ನಪ್ಪ ಇದ್ದರು.



ವೇಶ್ಯಾವಾಟಿಕೆ: ಇಬ್ಬರ ಬಂಧನ

ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಮಹಿಳೆಯರಿಬ್ಬರನ್ನು ರಕ್ಷಿಸಿದ್ದಾರೆ.

ವಿಜಯನಗರ 4ನೇ ಹಂತದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಹಾಸನ ಮೂಲದ 40 ವರ್ಷದ ಮಹಿಳೆ ಹಾಗೂ ಟಿ.ಕೆ.ಬಡಾವಣೆಯ ರೇವಣ್ಣ (36) ಬಂಧಿತರು. ಇವರಿಂದ 13 ಸಾವಿರ ರೂ. ನಗದು, 2 ಬೈಕ್‌ ಮತ್ತು ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇವರು ಕಳೆದ ಒಂದೂವರೆ ತಿಂಗಳಿನಿಂದ ಇಲ್ಲಿ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ಕುಮಾರ್‌, ಸಿಬ್ಬಂದಿಗಳಾದ ಶಂಕರ್‌, ವೆಂಕಟೇಶ್‌ಗೌಡ, ಸೋಮಾರಾಧ್ಯ, ಈಶ್ವರ, ಲೋಕೇಶ್‌ ಕಾರ್ಯಾಚರಣೆ ತಂಡದಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ