ಆ್ಯಪ್ನಗರ

ತನ್ನದೇ ಮಗುವನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ, ತನ್ನ ಮಗುವನ್ನು ನೇಣು ಬಿಗಿದುಕೊಲೆ ಮಾಡಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ನಗರದ ಹೆಬ್ಬಾಳು ರಿಂಗ್ ರಸ್ತೆಯಲ್ಲಿನ ಪೊಲೀಸ್ ಕ್ವಾಟ್ರಸ್‌ನಲ್ಲಿ ಈ ಘಟನೆ ನಡೆದಿದೆ.

Vijaya Karnataka Web 27 Apr 2020, 7:36 pm
ಮೈಸೂರು: ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ, ತನ್ನ ಮಗುವನ್ನು ನೇಣು ಬಿಗಿದುಕೊಲೆ ಮಾಡಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ನಗರದ ಹೆಬ್ಬಾಳು ರಿಂಗ್ ರಸ್ತೆಯಲ್ಲಿನ ಪೊಲೀಸ್ ಕ್ವಾಟ್ರಸ್‌ನಲ್ಲಿ ಈ ಘಟನೆ ನಡೆದಿದೆ.
Vijaya Karnataka Web death


ಕ್ವಾಟ್ರಸ್‌ನ ನಿವಾಸಿ, ನಗರ ಪೊಲೀಸ್ ಕಂಟ್ರೋಲ್ ರೂಂನ ಪೇದೆ ಹರೀಶ್ ಅವರ ಪತ್ನಿ ವಿದ್ಯಾಶ್ರೀ(30) ಎಂಬುವರೇ ತಮ್ಮ ಐದು ವರ್ಷದ ಪುತ್ರಿ ಚಿನ್ಮಯಿ ಅವರನ್ನು ನೇಣು ಬಿಗಿದು ಕೊಲೆ ಮಾಡಿ, ತಾವು ಸಹ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ತನ್ನ ಅತ್ಮಹತ್ಯೆಗೆ ಯಾರೂ ಕಾರಣವಲ್ಲ ಎಂದು ತಿಳಿಸಿದ್ದಾರೆ. ಕುಟುಂಬಕ್ಕೆ ಎದುರಾಗುತ್ತಿದ್ದ ಆರ್ಥಿಕ ಸಂಕಷ್ಟದಿಂದ ವಿದ್ಯಾಶ್ರೀ ಜರ್ಜರಿತರಾಗಿದ್ದರು. ಅಲ್ಲದೇ ಪತಿ ಹರೀಶ್ ಮತ್ತು ಪುತ್ರಿಗೆ ಎರಡು ಬಾರಿ ಅಪಘಾತವಾಗಿ ಸಾಕಷ್ಟು ಸಮಸ್ಯೆಯಗಿತ್ತಲ್ಲದೇ ಆರ್ಥಿಕ ಸಮಸ್ಯೆಯಾಗಿತ್ತು.

ರಾಜ್ಯದಲ್ಲಿ 9 ಹೊಸ ಕೊರೊನಾ ಪ್ರಕರಣ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ!

ಇದರಿಂದ ಮಾನಸಿಕವಾಗಿ ನೊಂದಿದ್ದ ವಿದ್ಯಾಶ್ರೀ, ಭಾನುವಾರ ರಾತ್ರಿ ಕೆಲಸಕ್ಕೆ ತೆರಳಿದ್ದಾಗ ಮನೆಯಲ್ಲಿ ಮಗುವನ್ನು ಕೊಲೆ ಮಾಡಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಪತಿ ಹರೀಶ್ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 3ರ ನಂತರ ಮದ್ಯ ಮಾರಾಟಕ್ಕೆ ಸಿಗುತ್ತಾ ಗ್ರೀನ್‌ಸಿಗ್ನಲ್: ಅಬಕಾರಿ ಸಚಿವ ಹೇಳಿದ್ದು ಹೀಗೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ