ಆ್ಯಪ್ನಗರ

ಜಿಪಂ ಎಇ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಜಿಪಂ ಸಹಾಯಕ ಎಂಜಿನಿಯರ್‌ ಅರ್ಷದ್‌ಪಾಷ ಅವರ ಮೈಸೂರಿನ ನಿವಾಸ ಹಾಗೂ ಅವರು ಕಾರ್ಯನಿರ್ವಹಿಸುವ ಪಿರಿಯಾಪಟ್ಟಣದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಕೆಲ ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

Vijaya Karnataka 22 Jun 2019, 5:00 am
ಪಿರಿಯಾಪಟ್ಟಣ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಜಿಪಂ ಸಹಾಯಕ ಎಂಜಿನಿಯರ್‌ ಅರ್ಷದ್‌ಪಾಷ ಅವರ ಮೈಸೂರಿನ ನಿವಾಸ ಹಾಗೂ ಅವರು ಕಾರ್ಯನಿರ್ವಹಿಸುವ ಪಿರಿಯಾಪಟ್ಟಣದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಕೆಲ ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
Vijaya Karnataka Web acb attack on zp ae home office
ಜಿಪಂ ಎಇ ಮನೆ, ಕಚೇರಿ ಮೇಲೆ ಎಸಿಬಿ ದಾಳಿ


ಪಿರಿಯಾಪಟ್ಟಣದಲ್ಲಿರುವ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ಉಪ ವಿಭಾಗ ಕಚೇರಿಗೆ ದಾಳಿ ನಡೆಸಿ ಮೂರು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಮೈಸೂರಿನ ಉದಯಗಿರಿಯಲ್ಲಿರುವ ಅರ್ಷದ್‌ ಪಾಷಾ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. 2 ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ಎರಡೂ ಕಡೆ ದಾಳಿ ನಡೆಸಿದ್ದಾರೆ.

ಎಸಿಬಿ ಎಸ್ಪಿ ರಶ್ಮಿ, ಡಿವೈಎಸ್‌ಪಿ ಮಂಜುನಾಥ್‌, ಇನ್ಸ್‌ಪೆಕ್ಟರ್‌ ಶೇಖರ್‌, ಶ್ರೀಕಾಂತ್‌, ಸಿಬ್ಬಂದಿ ಮಲ್ಲಿಕಾರ್ಜುನ್‌, ಮಹದೇವ ಸ್ವಾಮಿ, ಕೃಷ್ಣಕುಮಾರ್‌, ಸುರೇಶ್‌ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ