ಆ್ಯಪ್ನಗರ

ಹೆಚ್.ಡಿ.ಕೋಟೆಯಲ್ಲಿ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಪಿಡಿಓ ಮತ್ತು ಗ್ರಾಪಂ ಸಿಬ್ಬಂದಿ

ಮೈಸೂರಿನಲ್ಲಿ ನಿವೇಶನದ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಓ ಹಾಗೂ ದ್ವಿತೀಯ ದರ್ಜೆ ಸಹಾಯಕ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

Lipi 27 Feb 2021, 12:16 pm
ಮೈಸೂರು: ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳು ಭ್ರಷ್ಟ ಮಿಕಗಳಿಗೆ ಶಾಕ್ ಕೊಟ್ಟಿದ್ದಾರೆ . ನಿವೇಶನದ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಓ ಹಾಗೂ ದ್ವಿತೀಯ ದರ್ಜೆ ಸಹಾಯಕ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
Vijaya Karnataka Web mysuru
ಪಿಡಿಓ ಲೋಕೇಶ್ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೆಂಕಟೇಶ್


ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶರಾಮ್ ಎಂಬುವರು ಎಸಿಬಿಗೆ ದೂರು ನೀಡಿದ್ದರು. ಮೊದಲೇ 10 ಸಾವಿರ ಕೊಟ್ಟಿದ್ದ ಕೇಶರಾಮ್ 20 ಸಾವಿರ ಕೋಡೋದಾಗಿ ಹೇಳಿ ಬಂದಿದ್ರು. ಇದೇ ವಿಚಾರವನ್ನ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದಿದ್ರು . ಶುಕ್ರವಾರ ಬಾಕಿ ಉಳಿದ 20 ಸಾವಿರ ಸ್ವೀಕರಿಸುವಾಗ ಪಿಡಿಓ ಲೋಕೇಶ್ ಹಾಗೂ ಎಸ್ಡಿಎ ವೆಂಕಟೇಶ್ ಸಿಕ್ಕಿಬಿದ್ದಿದ್ದಾರೆ. ದೂರು ದಾಖಲಿಸಿಕೊಂಡ ಮೈಸೂರು ಭ್ರಷ್ಟಾಚಾರ ನಿಗ್ರಹದಳದ ಎಸ್ ಪಿ ಅರುಣಾಂಶಗಿರಿ ಮಾರ್ಗದರ್ಶನದಲ್ಲಿ ಲಂಚಬಾಕರನ್ನು ಹಿಡಿಯಲು ಪ್ಲಾನ್ ಮಾಡಲಾಯಿತು. ಡಿ ಎಸ್ ಪಿ ಪರಶುರಾಮಪ್ಪ, ಪೊಲೀಸ್ ನಿರೀಕ್ಷಕ ಕರೀಂರಾವತರ್ ಮತ್ತು ಕೆ ಎಸ್ ನಿರಂಜನ್ ಹೊಂಚು ಹಾಕಿದ್ದರು.

ಗ್ರಾಮ ಪಂಚಾಯ್ತಿ ಪಿಡಿಓ ಲೋಕೇಶ್ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೆಂಕಟೇಶ್ ಅವರು ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಈಗ ಇಬ್ಬರನ್ನು ವಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಕೇಳಿಬಂದಿದ್ವು . ಆದ್ರೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇತ್ತು. ಇದೀಗ ಶುಕ್ರವಾರ ಇಬ್ಬರು ಸಾಕ್ಷಿಸಮೇತ ಸಿಕ್ಕಿಬಿದ್ದಿದ್ದು, ಭ್ರಷ್ಟಾಚಾರಿಗಳು ಎಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ