ಆ್ಯಪ್ನಗರ

ಅಪಘಾತ: ಗಾಯಾಳು ಮಕ್ಕಳು ಚೇತರಿಕೆ

ತಾಲೂಕಿನ ಕುರಹಟ್ಟಿ ಗ್ರಾಮದ ಹೊರವಲಯದಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಆರು ಮಂದಿ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಕ್ಕಳು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Vijaya Karnataka 26 Jun 2018, 10:03 pm
ನಂಜನಗೂಡು: ತಾಲೂಕಿನ ಕುರಹಟ್ಟಿ ಗ್ರಾಮದ ಹೊರವಲಯದಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಆರು ಮಂದಿ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಕ್ಕಳು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
Vijaya Karnataka Web accident the recovery of injured children
ಅಪಘಾತ: ಗಾಯಾಳು ಮಕ್ಕಳು ಚೇತರಿಕೆ


ಅಪಘಾತದಲ್ಲಿ ಗಾಯಗೊಂಡಿದ್ದ ಆರು ಮಂದಿ ವಿದ್ಯಾರ್ಥಿಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ತಪಾಸಣೆಗೆ ಒಳಪಡಿಸಲಾಗಿತ್ತು. ಮಕ್ಕಳಿಗೆ ಯಾವುದೇ ತೊಂದರೆಯಿಲ್ಲ ಎಂಬುದನ್ನು ವೈದ್ಯರು ಖಚಿತ ಪಡಿಸಿ ಅಗತ್ಯ ಚಿಕಿತ್ಸೆ ನೀಡುವ ಮೂಲಕ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ.

ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಾರಾಯಣ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಜಿ.ಮಹೇಶ್ ನೇತತ್ವದ ಅಧಿಕಾರಿಗಳ ತಂಡ ಕುರಹಟ್ಟಿ, ಶ್ರೀನಗರ ಹಾಗೂ ಸಿಂಗಾರಿಪುರ ಗ್ರಾಮಕ್ಕೆ ತೆರಳಿ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಾರಾಯಣ ಮಾತನಾಡಿ, ‘‘ಗಾಯಗೊಂಡಿದ್ದ ಆರು ಮಕ್ಕಳ ಪೈಕಿ ಯಾರಿಗೂ ಗಂಭೀರ ನೋವು ಕಾಣಿಸಿಕೊಂಡಿಲ್ಲ ಎಂದು ವೈದ್ಯರು ದಢಪಡಿಸಿ ದ್ದಾರೆ. ಹೀಗಾಗಿ ಸೋಮವಾರ ರಾತ್ರಿ ಆಸ್ಪತ್ರೆಯಿಂದ ಮಕ್ಕಳನ್ನು ಬಿಡುಗಡೆಗೊಳಿಸಿ ಮನೆಗಳಿಗೆ ಕಳುಹಿಸಲಾಗಿದೆ. ಇನ್ನು ಶಾಲಾ ವಾಹನಗಳಲ್ಲಿ ನಿಗದಿಗಿಂತ ಹೆಚ್ಚು ಮಕ್ಕಳನ್ನು ಸಾಗಿಸುತ್ತಿರುವುದನ್ನು ತಡೆಗಟ್ಟುವ ಜತೆಗೆ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡುವ ಸಲುವಾಗಿ ಬುಧವಾರ ಖಾಸಗಿ ಶಾಲೆಗಳ ಮುಖ್ಯಶಿಕ್ಷಕರ ಸಭೆ ಕರೆಯಲಾಗಿದೆ,’’ಎಂದರು.

‘‘ಖಾಸಗಿ ವಾಹನಗಳ ಮೇಲೆ ಅವಲಂಬಿತರಾಗಿರುವ ಪೋಷಕರು ಆ ವಾಹನಗಳಲ್ಲಿ ಮಕ್ಕಳ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಖಾತರಿ ಮಾಡಿಕೊಳ್ಳಬೇಕು. ಒಂದು ವೇಳೆ ನಿಯಮ ಬಾಹಿರವಾಗಿ ಮಕ್ಕಳನ್ನು ಸಾಗಿಸುತ್ತಿರುವುದು ಕಂಡು ಬಂದಲ್ಲಿ ಸಾರಿಗೆ ಹಾಗೂ ಸಂಚಾರ ಪೊಲೀಸರ ಗಮನಕ್ಕೆ ತಂದು ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ,’’ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ