ಆ್ಯಪ್ನಗರ

ಸಾಲಬಾಧೆ: ವ್ಯಾಪಾರಿ ಆತ್ಮಹತ್ಯೆ

​ಸಾಲಬಾಧೆ ತಾಳಲಾರದೆ ನಗರದ ವ್ಯಾಪಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಾಮುಂಡಿ ಟೌನ್‌ಶಿಪ್‌ ಬಡಾವಣೆ ನಿವಾಸಿ, ಸೂರ್ಯ ಟ್ರೇಡರ್ಸ್ ಮಾಲೀಕ ಲೋಹಿತ್‌(40) ಮೃತರು.

Vijaya Karnataka 23 Oct 2019, 5:00 am
ನಂಜನಗೂಡು
Vijaya Karnataka Web alabadhe vyapari atmahatye
ಸಾಲಬಾಧೆ: ವ್ಯಾಪಾರಿ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ನಗರದ ವ್ಯಾಪಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಾಮುಂಡಿ ಟೌನ್‌ಶಿಪ್‌ ಬಡಾವಣೆ ನಿವಾಸಿ, ಸೂರ್ಯ ಟ್ರೇಡರ್ಸ್ ಮಾಲೀಕ ಲೋಹಿತ್‌(40) ಮೃತರು.
''ವ್ಯಾಪಾರದ ಉದ್ದೇಶಕ್ಕಾಗಿ ಅಂಗಡಿ ಮೇಲೆ ಕೈಸಾಲ ತೆಗೆದುಕೊಂಡಿದ್ದಲ್ಲದೆ ಇತ್ತೀಚೆಗೆ ನೂತನವಾಗಿ ಮನೆ ನವೀಕರಣ ಮಾಡುವ ಸಲುವಾಗಿಯೂ ಖಾಸಗಿಯಾಗಿ ಸಾಲ ಮಾಡಿದ್ದರು. ಇದರಿಂದ ಚಿಂತೆಗೊಳಗಾಗಿದ್ದರು. ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಪತಿ ಬೆಳಗಿನ ಜಾವ ಮನೆಯಲ್ಲಿಕಾಣಲಿಲ್ಲ. ಗಾಬರಿಗೊಂಡು ಹುಡುಕಾಟ ನಡೆಸಿದಾಗ ಮನೆಯ ಮೇಲ್ಭಾಗ ದಲ್ಲಿರುವ ಕೊಠಡಿಯಲ್ಲಿನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು,'' ಎಂದು ಮೃತರ ಪತ್ನಿ ಕವಿತಾ ನೀಡಿರುವ ದೂರಿನಲ್ಲಿತಿಳಿಸಿದ್ದಾರೆ.

ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಶೇಖರ್‌ ನೇತೃತ್ವದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿದೂರು ದಾಖಲಾಗಿದ್ದು, ಮರಣೋತ್ತರ ಬಳಿಕ ವಾರಸುದಾರರಿಗೆ ಹಸ್ತಾಂತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ