ಆ್ಯಪ್ನಗರ

ಮೈತ್ರಿ ಧರ್ಮ ಪಾಲನೆಯಾಗದಿದ್ದರೆ ಶಿಸ್ತು ಕ್ರಮ: ಸಾರಾ ಎಚ್ಚರಿಕೆ

ಮೈತ್ರಿ ಧರ್ಮ ಪಾಲಿಸದ ತನ್ನ ಕಾರ್ಯಕರ್ತರಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೊದಲು ಎಚ್ಚರಿಕೆ ನೀಡಲಿದೆ. ನಂತರವೂ ಸರಿಪಡಿಸಿಕೊಳ್ಳದಿದ್ದಲ್ಲಿ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳಿದ್ದಾರೆ.

Vijaya Karnataka 23 Mar 2019, 5:00 am
ಮೈಸೂರು: ಮೈತ್ರಿ ಧರ್ಮ ಪಾಲಿಸದ ತನ್ನ ಕಾರ್ಯಕರ್ತರಿಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೊದಲು ಎಚ್ಚರಿಕೆ ನೀಡಲಿದೆ. ನಂತರವೂ ಸರಿಪಡಿಸಿಕೊಳ್ಳದಿದ್ದಲ್ಲಿ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳಿದ್ದಾರೆ.
Vijaya Karnataka Web alliance sara warns
ಮೈತ್ರಿ ಧರ್ಮ ಪಾಲನೆಯಾಗದಿದ್ದರೆ ಶಿಸ್ತು ಕ್ರಮ: ಸಾರಾ ಎಚ್ಚರಿಕೆ


ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಶುಕ್ರವಾರ ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

''ನಮ್ಮ ಪಕ್ಷದ ವರಿಷ್ಠರು ಮೈತ್ರಿ ಧರ್ಮ ಪಾಲನೆಗೆ ನಮಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಮತ ಪ್ರಮಾಣ ಕಡಿಮೆಯಾದರೆ ಅದಕ್ಕೆ ನಾವೇ ಹೊಣೆಗಾರರು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಮೈತ್ರಿ ಧರ್ಮದ ಪಾಲನೆ ಎರಡೂ ಪಕ್ಷಗಳಿಂದ ಆಗಬೇಕಿದೆ. ಮೈತ್ರಿಯ ಲಾಭ ಉಭಯ ಪಕ್ಷಗಳಿಗೂ ಸಿಗಬೇಕಿದೆ. ಫಲಿತಾಂಶದಲ್ಲಿ ಲಾಭ ಸಿಗದಿದ್ದರೆ ಮೈತ್ರಿ ಪ್ರಯೋಜನವಿಲ್ಲ,'' ಎಂದು ಮಹೇಶ್‌ ಹೇಳಿದರು.

''ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರನ್ನು ಬೆಂಬಲಿಸಿರುವ ನಟರಾದ ದರ್ಶನ್‌ ಮತ್ತು ಯಶ್‌ ಅವರ ಬಗ್ಗೆ ನಮ್ಮ ಪಕ್ಷದ ಕೆಲವರು ವೈಯಕ್ತಿಕವಾಗಿ ಮಾತಾಡಿದ್ದಾರೆ. ಇದನ್ನು ಪಕ್ಷ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಯಾವುದೇ ಪಕ್ಷದ ಬೆಂಬಲಿತರ ಬಗ್ಗೆ ಯಾರೂ ವೈಯಕ್ತಿಕವಾಗಿ ಮಾತಾಡಬಾರದು,'' ಎಂದು ಮಹೇಶ್‌ ಹೇಳಿದರು.

''ಕೆ.ಆರ್‌.ನಗರದಲ್ಲಿ ಕಾಂಗ್ರೆಸ್‌ ನಾಯಕರು ಸುಮಲತಾಗೆ ಬೆಂಬಲ ನೀಡಿರುವ ವಿಚಾರವನ್ನು ಕಾಂಗ್ರೆಸ್‌ ವರಿಷ್ಠರ ಗಮನಕ್ಕೆ ತರಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ