ಆ್ಯಪ್ನಗರ

ಮೈಸೂರು ದಸರಾ 2019: ಮರದ ಅಂಬಾರಿ ಹೊತ್ತು ತಾಲೀಮು ನಡೆಸಿದ ಗಜಪಡೆ

ಪೂರ್ವಾಭ್ಯಾಸದ ಭಾಗವಾಗಿ ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗಿಯಾಗುವ ಗಜಪಡೆ ಇಂದು ಮರದ ಅಂಬಾರಿ ಹೊರುವ ತಾಲೀಮು ನಡೆಸಿತು.

Vijaya Karnataka Web 19 Sep 2019, 2:58 pm
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಗಜಪಡೆ ಇಂದು (ಗುರುವಾರ) ಪೂರ್ವಾಭ್ಯಾಸದ ಭಾಗವಾಗಿ ಅರಮನೆ ಆವರಣದಿಂದ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದವರೆಗೆ ಮರದ ಅಂಬಾರಿ ಹೊರುವ ತಾಲೀಮು ನಡೆಸಿತು.

ದಸರಾ ಉತ್ಸವದಲ್ಲಿ ಭಾಗಿಯಾಗುವ ಎಲ್ಲ ಆನೆಗಳು ಈ ತಾಲೀಮಿನಲ್ಲಿ ಭಾಗವಹಿಸಿದ್ದವು. ಇದಕ್ಕೂ ಮುನ್ನ ಮರದ ಅಂಬಾರಿ ಹಾಗೂ ಗಜಪಡೆಗೆ ಅರಮನೆ ಆವರಣದಲ್ಲಿ ಪೂಜೆ ಸಲ್ಲಿಸಲಾಯಿತು.

ಅರಮನೆಯಿಂದ ಸಾಗಿ ಮೈಸೂರು ಕೆ ಆರ್ ವೃತ್ತದ ಮೂಲಕ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದವರೆಗೂ ಗಜಪಡೆಯ ತಾಲೀಮು ನಡೆಯಿತು.

ನಗರದಲ್ಲಿ ಪ್ರತಿನಿತ್ಯ ಆನೆಗಳ ತಾಲೀಮು ನೋಡಿ ಸಂತಸ ಪಡುತ್ತಿದ್ದ ಸಾರ್ವಜನಿಕರು, ಇಂದು ಗಜಪಡೆ ಮರದ ಅಂಬಾರಿ ಹೊತ್ತು ಸಾಗುವುದನ್ನು ನೋಡಿ ಖಷಿ ಪಟ್ಟರು.

ದಸರಾ ಉತ್ಸವದ ದಿನ ನಡೆಯುವ ಮೆರವಣಿಗೆಯಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಬೇಕಾದರೆ, ಗಜಪಡೆಗೆ ತೊಂದರೆಯಾಗುತ್ತದೆ ಎನ್ನುವ ಉದ್ದೇಶದಿಂದ ಮುಂಚಿತವಾಗಿಯೇ ಅವುಗಳನ್ನು ಮಾನಸಿಕವಾಗಿ ಸಿದ್ಧಗೊಳಿಸುವ ಸಲವಾಗಿ ಈ ತಾಲೀಮು ನಡೆಸಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ