ಆ್ಯಪ್ನಗರ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಬಿ ಶರತ್ ಅಧಿಕಾರ ಸ್ವೀಕಾರ

ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಟ ಮಾಡಲು ಎಲ್ಲಾ ಅಧಿಕಾರಿಗಳ ಸಹಕಾರ ಪಡೆದುಕೊಂಡಿದ್ದೇನೆ. ಕಲಬುರಗಿಯಲ್ಲಿ ಯಶಸ್ವಿಯಾಗಿ ಕೊರೊನಾ ಸಂದರ್ಭವನ್ನು ನಿರ್ವಹಿಸಿದ್ದೇನೆ. ಅದರ ಅನುಭವದ ಮೇಲೆ ಮೈಸೂರಿನಲ್ಲಿಯೂ ಕಾರ್ಯ ನಿರ್ವಹಿಸುತ್ತೇನೆ

Vijaya Karnataka Web 29 Aug 2020, 4:31 pm
ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿಗಳಾಗಿ ಬಿ.ಶರತ್ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
Vijaya Karnataka Web ಬಿ ಶರತ್‌
ಬಿ ಶರತ್‌


ಶರತ್‌ರವರು ಈ ಹಿಂದೆ ಕಲಬುರಗಿಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. 2011ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.

ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಬೀದರ್ ಮತ್ತು ಮಂಡ್ಯ ಜಿಲ್ಲಾ ಪಂಚಾಯತ್‌ಗಳಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ಬಿ.ಶರತ್ ಅಧಿಕಾರಿಗಳ ಸಭೆ ಕರೆದಿದ್ದು, ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಯಿತು. ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸಭೆ ನಡೆದಿದ್ದು ಅಧಿಕಾರಿಗಳ ಪರಿಚಯ ಮೂಲಕ ಕೂಡ ನಡೆಯಿತು. ಭೆಯಲ್ಲಿ ಕೊರೊನಾ ನಿಯಂತ್ರಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಕೂಡ ನಡೆಯಿತು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮಾಡಿ ಕೊರೊನಾ ಹಾಗೂ ಪ್ರವಾಹದ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದೇನೆ. ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಅವಲೋಕನ ಮಾಡಿದ್ದು, ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಟ ಮಾಡಲು ಎಲ್ಲಾ ಅಧಿಕಾರಿಗಳ ಸಹಕಾರ ಪಡೆದುಕೊಂಡಿದ್ದೇನೆ. ಕಲಬುರಗಿಯಲ್ಲಿ ಯಶಸ್ವಿಯಾಗಿ ಕೊರೊನಾ ಸಂದರ್ಭವನ್ನು ನಿರ್ವಹಿಸಿದ್ದೇನೆ. ಅದರ ಅನುಭವದ ಮೇಲೆ ಮೈಸೂರಿನಲ್ಲಿಯೂ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ