ಆ್ಯಪ್ನಗರ

ಅತ್ಯಾಚಾರಿಗಳಿಗೆ ಶೀಘ್ರ ಕಠಿಣ ಶಿಕ್ಷೆಯಾಗಲಿ

ದೇಶದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಹಾಗೂ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

Vijaya Karnataka 25 Apr 2019, 5:00 am
ಮೈಸೂರು: ದೇಶದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಹಾಗೂ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web 2404-2-1-MYSPHOTOS-29


ಗಾಂಧಿ ಚೌಕದಲ್ಲಿ ಜಮಾಣೆಗೊಂಡ ಪ್ರತಿಭಟನಾಕಾರರು, ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

''ರಾಯಚೂರು, ನಂಜನಗೂಡು, ಕಲಬುರುಗಿ ಸೇರಿದಂತೆ ನಾನಾ ಪ್ರದೇಶಗಳಲ್ಲಿ ಇತ್ತೀಚಿಗೆ ನಡೆದಿರುವ ಆತ್ಯಾಚಾರಗಳು ಕನ್ನಡ ನಾಡಿಗೆ ಅಪಮಾನವಾಗಿದ್ದು, ಮಹಿಳೆಯರು ಹಾಗೂ ಕಾಲೇಜು ವಿದ್ಯಾರ್ಥಿನಿಯರಿಗೆ ಸುರಕ್ಷಿತೆಯೇ ಇಲ್ಲದಂತಾಗಿದೆ,'' ಎಂದು ಕಿಡಿಕಾರಿದರು.

''ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪ್ರಕರಣವನ್ನು ತನಿಖೆ ನಡೆಸಬೇಕು, ನಂಜನಗೂಡಿನ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈಗ ಮತ್ತೊಂದು ಪ್ರಕರಣ ರಾಯಚೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು,'' ಎಂದು ಆಗ್ರಹಿಸಿದರು.

ವೇದಿಕೆ ಗೌರವಾಧ್ಯಕ್ಷ ಹೊನ್ನೇಗೌಡ, ರಾಜ್ಯಾಧ್ಯಕ್ಷ ಸೋಮೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಡಿ.ನಿಂಗಪ್ಪ, ಜಿಲ್ಲಾಧ್ಯಕ್ಷ ಪಿ. ಮಂಜುನಾಥ್‌, ಉಪಾಧ್ಯಕ್ಷ ಕೃಷ್ಣ ಮಹದೇವ್‌, ನಗರಾಧ್ಯಕ್ಷ ಹೇಮಂತಕುಮಾರ್‌, ತಾಲೂಕು ಕಾರ್ಮಿಕ ವಿಭಾಗದ ಅಧ್ಯಕ್ಷ ಸಿದ್ದೇಗೌಡ, ನಗರ ಉಪಾಧ್ಯಕ್ಷ ಬಿದ್ದಪ್ಪ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ