ಆ್ಯಪ್ನಗರ

ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದು ಸಿದ್ದರಾಮಯ್ಯನವರ ಹಠ: ಮೈಸೂರಿನ ನೂತನ ಮೇಯರ್

ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಇರಲಿಲ್ಲ.ಮೈತ್ರಿ ಸರ್ಕಾರದಿಂದ ನನಗೆ ಮೇಯರ್ ಅಧಿಕಾರ ಸಿಕ್ಕಿದೆ. ಸಿದ್ದರಾಮಯ್ಯನವರ ಹಠ ಈ ಚುನಾವಣೆಯಲ್ಲಿ ಗೆಲುವು ಕಂಡಿದೆ, ಎಂದರು.

Vijaya Karnataka 17 Nov 2018, 2:50 pm
ಮೈಸೂರು: 'ಸಿದ್ದರಾಮಯ್ಯನವರ ಹಠ ಈ ಚುನಾವಣೆಯಲ್ಲಿ ಗೆದ್ದಿದೆ', ಎಂದು ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿರುವ ಪುಷ್ಪಲತಾ ಜಗನ್ನಾಥ್ ಹೇಳಿದ್ದಾರೆ.
Vijaya Karnataka Web Siddramaiah


ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಇರಲಿಲ್ಲ.ಮೈತ್ರಿ ಸರ್ಕಾರದಿಂದ ನನಗೆ ಮೇಯರ್ ಅಧಿಕಾರ ಸಿಕ್ಕಿದೆ. ಸಿದ್ದರಾಮಯ್ಯನವರ ಹಠ ಈ ಚುನಾವಣೆಯಲ್ಲಿ ಗೆಲುವು ಕಂಡಿದೆ, ಎಂದರು.

ಮೇಯರ್ ಆಗಿ ಆಯ್ಕೆಯಾಗಿದ್ದಕ್ಕೆ ಜೆಡಿಎಸ್, ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಅರ್ಪಿಸಿದ ಅವರು, ನಾನು ಉಪ ಮೇಯರ್ ಆಗಿ ಕೂಡ ಕೆಲಸ ಮಾಡಿದ್ದೇನೆ.
ನನ್ನ ಮೊದಲ ಆದ್ಯತೆ ಸ್ವಚ್ಛತೆಗೆ ಎಂದು ಹೇಳಿದ್ದಾರೆ.

ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪ ಮೇಯರ್‌ಗಾಗಿ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಗೆಲುವು ದೊರೆತಿದ್ದು,
ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ ಮೇಯರ್, ಜೆಡಿಎಸ್‌ನ ಶಫಿ ಅಹಮದ್ ಉಪ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.

ಪುಷ್ಪಲತಾ ವಿರುದ್ಧ ಬಿಜೆಪಿಯ ಸುನಂದಾ ಪಾಲನೇತ್ರ ಮತ್ತು ಶಫಿ ವಿರುದ್ಧ ಬಿಜೆಪಿಯ ಸತೀಶ್ ಪರಾಭವಗೊಂಡಿದ್ದು, ಕಾಂಗ್ರೆಸ್- ಜೆ಼ಡಿಎಸ್ ಮೈತ್ರಿಗೆ ಬಿಜೆಪಿ ವಿರುದ್ದ 48- 24 ಮತಗಳ ಅಂತರದ ಗೆಲುವು ದೊರೆತಿದೆ.

ಒಟ್ಟು 65 ಸದಸ್ಯ ಬಲದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತವಿರಲಿಲ್ಲ. ಹಾಗಾಗಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆ ಹಿಡಿಯುವುದು ಅನಿವಾರ್ಯವಾಗಿತ್ತು.

22 ಸ್ಥಾನ ಹೊಂದಿರುವ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದು, ಕಾಂಗ್ರೆಸ್ 19, ಜೆಡಿಎಸ್ 18, ಬಿ.ಎಸ್.ಪಿ 1 ಹಾಗೂ ಐವರು ಪಕ್ಷೇತರ ಸದಸ್ಯರಿದ್ದರು. ಇದರ ಜೊತೆಗೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಂಸದ, ಶಾಸಕರು, ವಿಧಾನಪರಿಷತ್ತಿನ ಸದಸ್ಯರು ಮತದಾನದ ಹಕ್ಕು ಹೊಂದಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಇರುವುದರಿಂದ ಮೈಸೂರು ಪಾಲಿಕೆಯಲ್ಲೂ ಇದೇ ದೋಸ್ತಿ ಪಕ್ಷಗಳು ಅಧಿಕಾರ ಹಿಡಿಯುವುದೂ ಕೂಡ ಬಹುತೇಕ ಖಚಿತವಾಗಿತ್ತು. ಆದರೆ ಮೇಯರ್ ಸ್ಥಾನಕ್ಕಾಗಿ ದೋಸ್ತಿ ಪಕ್ಷಗಳ ನಡುವೆಯೇ ತೀವ್ರ ಪೈಪೋಟಿ ಏರ್ಪಟ್ಟಿದ್ದರಿಂದ ಮೇಯರ್ ಗಿರಿ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲಕ್ಕೆಡೆ ಮಾಡಿಕೊಟ್ಟಿತ್ತು.

ಮೇಯರ್ ಗಿರಿ ಜೆಡಿಎಸ್‌ಗೆ ಸಿಗದಿದ್ದರೆ ಬಿಜೆಪಿ ಜೊತೆಗೂ ಮೈತ್ರಿಗೆ ಸಿದ್ದ ಎಂದು ಜೆಡಿಎಸ್ ಕೆಲವು ನಾಯಕರು ಸುಳಿವು ನೀಡಿದ್ದರು. ಇದರ ಗಂಭೀರತೆ ಅರಿತ ಮಾಜಿ ಸಿ.ಎಂ ಸಿದ್ದರಾಮಯ್ಯ, ನೇರವಾಗಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಜೊತೆ ದೂರವಾಣಿ ಮೂಲಕ ಮಾತನಾಡಿ ಮೇಯರ್ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವಂತೆ ಕೋರಿದ್ದರು. ಸಿದ್ದು ಮಾತಿಗೆ ತಲೆದೂಗಿದ ದೇವೇಗೌಡರು, ಮೈಸೂರು ಮೇಯರ್ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದ್ದರು.

ಸಿದ್ದರಾಮಯ್ಯ, ಎಂ.ಕೆ.ಸೋಮಶೇಖರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪಾಲಿಕೆ ಸದಸ್ಯೆ

ಮೇಯರ್ ಚುನಾವಣೆಗೂ ಮುನ್ನ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ನೂತನ ಪಾಲಿಕೆ ಸದಸ್ಯೆ ಶೋಭಾ ಸುನೀಲ್ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಂ.ಕೆ.ಸೋಮಶೇಖರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶೋಭಾ ಸುನೀಲ್ ಇದೇ ಮೊದಲ ಬಾರಿಗೆ ಪಾಲಿಕೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ