ಆ್ಯಪ್ನಗರ

ಸಿದ್ದರಾಮಯ್ಯ ನಮ್ಮ ಆಪ್ತರು ಎಂಬುವುದರಲ್ಲಿ ಅನುಮಾನವಿಲ್ಲ! - ಎಸ್‌ಟಿ ಸೋಮಶೇಖರ್

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನನ್ನ ಆಪ್ತರು, ನಿರೀಕ್ಷಿತ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಮನಸ್ಸಿಗೆ ನೋವಾಗಿ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ.

Vijaya Karnataka Web 10 Dec 2019, 9:46 pm
ಮೈಸೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನನ್ನ ಆಪ್ತರು ಎಂಬುವುದನ್ನು ಯಾವುದೇ ಅನುಮಾನವಿಲ್ಲ. ಮನಸ್ಸಿಗೆ ಬೇಜಾರಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ಕುರಿತಾಗಿ ಪರೋಕ್ಷವಾಗಿ ಒಲವು ವ್ಯಕ್ತಪಡಿಸಿದ್ದಾರೆ.
Vijaya Karnataka Web bjp mla st somashekar statement on siddaramaiah at mysore
ಸಿದ್ದರಾಮಯ್ಯ ನಮ್ಮ ಆಪ್ತರು ಎಂಬುವುದರಲ್ಲಿ ಅನುಮಾನವಿಲ್ಲ! - ಎಸ್‌ಟಿ ಸೋಮಶೇಖರ್


ಇದೇ ವೇಳೆ ಮಾತನಾಡಿದ ಅವರು,ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಚಿವ ಸ್ಥಾನ ಕೊಡುವುದು, ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಯಶವಂತಪುರದ ಶಾಸಕರಾಗಿ ಚುನಾಯಿತರಾಗಿರುವ ಬಿಜೆಪಿಯ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಸೋಮಶೇಖರ್ ಮಂಗಳವಾರ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿ, ಬಿಜೆಪಿ ಸೇರುವಾಗ ಯಾವುದೇ ಷರತ್ತು ಹಾಕಿಲ್ಲ. ಸಚಿವ ಸ್ಥಾನ ನೀಡುವಂತೆ ಬೇಡಿಕೆ ಮುಂದಿಟ್ಟಿಲ್ಲ ಎಂದರು.
ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿದೆ. ಉಪ ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ಕಾಂಗ್ರೆಸ್ ಕಥೆ ಮುಗಿಯಿತು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಜೆಡಿಎಸ್ ಪರಿಸ್ಥಿತಿ ಆ ರೀತಿಯಿಲ್ಲ ಎಂದು ಅವರು ಹೇಳಿದರು.

ಗೆದ್ದ ಶಾಸಕರಿಗಷ್ಟೇ ಮಂತ್ರಿ ಭಾಗ್ಯ; ಕುತೂಹಲ ಕೆರಳಿಸಿದ ಈಶ್ವರಪ್ಪ ಹೇಳಿಕೆ

ಸಿದ್ದರಾಮಯ್ಯ ಮನಸ್ಸಿಗೆ ಬೇಜಾರಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನಿಸುತ್ತಿದೆ. ಸಿದ್ದರಾಮಯ್ಯ ನಮ್ಮ ಆಪ್ತರು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಿದ್ದರಾಮಯ್ಯ ಅವರ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ. ಯಾವ ಪಕ್ಷ ಅಧಿಕಾರದಲ್ಲಿರುತ್ತದೆಯೋ ಉಪ ಚುನಾವಣೆಯಲ್ಲಿ ಸಾಮಾನ್ಯವಾಗಿ ಆ ಪಕ್ಷವೇ ಜಯಗಳಿಸುತ್ತದೆ. ಈ ಬಾರಿಯೂ ಅದೇ ರೀತಿಯಾಗಿದೆ ಎಂದರು.

ಕೆಪಿಸಿಸಿಗೆ ಹೊಸ ಸಾರಥಿ ಯಾರು ? ಡಿಕೆಶಿ v/s ಎಂಬಿಪಿ ಫೈಟ್ !

ಸೋಮಶೇಖರ್ ಇಲ್ಲಿನ ಕುವೆಂಪುನಗರದಲ್ಲಿರುವ ಮಾಜಿ ಸಚಿವ ಅಡಗೂರು ಎಚ್.ವಿಶ್ವನಾಥ್ ಅವರ ನಿವಾಸಕ್ಕೆ ತೆರಳಿ ಅವರ ಜೊತೆ ಮಾತುಕತೆ ನಡೆಸಿದರು. ವಿಶ್ವನಾಥ್ ನಮ್ಮ ಗುರುಗಳು. ಈಗ ಗುರುಗಳೇ ಸೋತಿದ್ದಾರೆ. ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ