ಆ್ಯಪ್ನಗರ

ಪ್ರಭಾವಿ ನಾಯಕರ ಮಣಿಸಲು ಬಿಜೆಪಿ ತಂತ್ರ

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನ ಖಂಡಿಸಿ ಅಗ್ರಹಾರ ವೃತ್ತದಲ್ಲಿ ನಡೆಯುತ್ತಿರುವ ಎರಡನೇ ದಿನದ ಧರಣಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

Vijaya Karnataka 9 Sep 2019, 5:00 am
ಮೈಸೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನ ಖಂಡಿಸಿ ಅಗ್ರಹಾರ ವೃತ್ತದಲ್ಲಿ ನಡೆಯುತ್ತಿರುವ ಎರಡನೇ ದಿನದ ಧರಣಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.
Vijaya Karnataka Web bjps strategy to bring down influential leaders
ಪ್ರಭಾವಿ ನಾಯಕರ ಮಣಿಸಲು ಬಿಜೆಪಿ ತಂತ್ರ


ಈ ವೇಳೆ ಮಾತನಾಡಿದ ಅವರು, ''ಕೇಂದ್ರದಲ್ಲಿ ಆಧಿಕಾರ ನಡೆಸುತ್ತಿರುವ ಬಿಜೆಪಿ ಮುಖಂಡರು ಪ್ರತಿಪಕ್ಷವನ್ನೇ ಗುರಿಯಾಗಿಸಿಕೊಂಡು ಸ್ವಾಯತ್ತ ಸಂಸ್ಥೆಗಳ ಮೂಲಕ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಈ ಮೂಲಕ ಪ್ರತಿಪಕ್ಷದ ಪ್ರಭಾವಿ ನಾಯಕರು ಯಾರು ಬಿಜೆಪಿ ವಿರುದ್ಧ ಧ್ವನಿ ಎತ್ತದಂತೆ ಮಾಡಲು ನರೇಂದ್ರ ಮೋದಿ, ಅಮಿತ್‌ ಶಾ ಮುಂದಾಗಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ,'' ಎಂದರು.

''ರಾಜ್ಯದಲ್ಲಿ ಒಂದು ಕಡೆ ನೆರೆ, ಮತ್ತೊಂದು ಕಡೆ ಬರ ಇದ್ದರೂ ಕೇಂದ್ರ ಸರಕಾರದಿಂದ ಯಾವುದೇ ಪರಿಹಾರ ಇದುವರೆಗೂ ಘೋಷಣೆಯಾಗಿಲ್ಲ. ಚಂದ್ರಯಾನ ವೀಕ್ಷಣೆಗಾಗಿ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರಮೋದಿ ಅವರು ರಾಜ್ಯಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸಲಿದ್ದಾರೆ ಎನ್ನುವ ವಿಶ್ವಾಸ ಇತ್ತು. ಆದರೆ, ಯಾವುದೇ ಅನುದಾನ ನೀಡಲಿಲ್ಲ. ಕೊನೆ ಪಕ್ಷ ವೈಮಾನಿಕ ಸಮೀಕ್ಷೆಯನ್ನಾದರೂ ನಡೆಸಿ ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ,'' ಎಂದು ಕಿಡಿಕಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಎರಡೂ ಜನರ ಕಷ್ಟಕ್ಕೆ ಸ್ಪಂದಿಸಲು ವಿಫಲವಾಗಿದೆ. ದ್ವೇಷದ ರಾಜಕಾರಣ ಮಾಡುತ್ತಾ ಸಿಬಿಐ, ಇಡಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಇದರಿಂದ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ಯಾವ ನಾಯಕರನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು.

ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಲತಾ ಅಮರನಾಥ್‌, ನಗರದ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್‌, ಮುಖಂಡರಾದ ಎನ್‌.ಭಾಸ್ಕರ್‌, ಕೆ.ಲೋಕೇಶ್‌ ರಾವ್‌, ಪ್ರಶಾಂತ್‌ಗೌಡ, ಗುರುಪಾದಸ್ವಾಮಿ, ಗಿರೀಶ್‌, ಹೆಡತಲೆ ಮಂಜುನಾಥ್‌, ಲೋಕನಾಥ್‌, ಪುಷ್ಪವಲ್ಲಿ, ರಫೀಕ್‌ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ