ಮೈಸೂರು: ಸಾಲಗಾರರ ಕಾಟಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಲ್ಯಾಣಗಿರಿ ನಿವಾಸಿ ಸಯ್ಯದ್ ಶಮಿವುಲ್ಲಾ(41) ಮೃತರು.
''ಸಯ್ಯದ್ ಎನ್ಇ ಸಿಲ್ಕ್ನಲ್ಲಿ ಕೆಲಸ ಮಾಡುತ್ತಿದ್ದು, ಈ ನಡುವೆ ಅಂಗಡಿ ಮಾಲೀಕ ಇಲಿಯಾಜ್ ಬೇಗ್ನಿಂದ ವ್ಯವಹಾರಕ್ಕಾಗಿ 2.8 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಹಣವನ್ನು ಸರಿಯಾದ ಸಮಯಕ್ಕೆ ತೀರಿಸಲು ಸಾಧ್ಯವಾಗದೇ ಇದ್ದುದರಿಂದ ಇಲಿಯಾಜ್ ಬೇಗ್ ಸೇರಿದಂತೆ ಏಳು ಮಂದಿ ಮನೆ ಎದುರು ಬಂದು ಗಲಾಟೆ ಮಾಡಿದ್ದರು. ಅಲ್ಲದೇ ಮಗಳನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಸಯ್ಯದ್, ವಾರದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ,'' ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಇಲಿಯಾಜ್ ಬೇಗ್ ಸೇರಿದಂತೆ ಏಳು ಮಂದಿ ವಿರುದ್ಧ ಉದಯಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.