ಆ್ಯಪ್ನಗರ

ಅನುಮತಿ ಇಲ್ಲದೆಡೆ ಪ್ರಸಾದ ವಿತರಣೆ ರದ್ದುಗೊಳಿಸಿ: ಕುರುಬೂರು ಆಗ್ರಹ

ಸರಕಾರದ ಅನುಮತಿ ಇಲ್ಲದ ಕಡೆ ದೇವಸ್ಥಾನಗಳಲ್ಲಿ ಪ್ರಸಾದ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದ್ದಾರೆ.

Vijaya Karnataka 20 Dec 2018, 9:24 pm
ಮೈಸೂರು: ಸರಕಾರದ ಅನುಮತಿ ಇಲ್ಲದ ಕಡೆ ದೇವಸ್ಥಾನಗಳಲ್ಲಿ ಪ್ರಸಾದ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದ್ದಾರೆ.
Vijaya Karnataka Web cancel prasad distribution without permission kurubur demand
ಅನುಮತಿ ಇಲ್ಲದೆಡೆ ಪ್ರಸಾದ ವಿತರಣೆ ರದ್ದುಗೊಳಿಸಿ: ಕುರುಬೂರು ಆಗ್ರಹ


''ಕಳೆದ ಹತ್ತಾರು ವರ್ಷಗಳ ಹಿಂದೆ ಯಾವುದೇ ದೇವಸ್ಥಾನಗಳಲ್ಲಿ ಪ್ರಸಾದ ನೀಡುವ ವ್ಯವಸ್ಥೆ ಇರಲಿಲ್ಲ. ಕೇವಲ ಹೂ, ತೀರ್ಥ ಪ್ರಸಾದ ಮಾತ್ರ ನೀಡಲಾಗುತ್ತಿತ್ತು. ಈಗಲೂ ಕೂಡ ಇದೇ ಮಾನದಂಡವನ್ನು ಅನುಸರಿಸುವಂತೆ ಸರಕಾರ ಅದೇಶ ಜಾರಿಗೆ ತರಬೇಕು. ಆ ಮೂಲಕ ಅಮಾಯಕ ಜನರು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಬೇಕು,'' ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

''ಹನೂರು ತಾಲೂಕಿನ ಸುಳವಾಡಿ ಗ್ರಾಮದ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದ ವಿತರಣೆಯಿಂದ 15 ಜನ ಅಮಾಯಕರು ಸಾವಿಗೀಡಾದ ಘಟನೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು,''ಎಂದು ಅವರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ