ಆ್ಯಪ್ನಗರ

ಬೈಕ್‌ಗೆ ಕಾರು ಡಿಕ್ಕಿ: ಸವಾರ ಸಾವು

ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಾವರೆಕೆರೆ ಗೇಟ್‌ ಬಳಿ ಭಾನುವಾರ ರಾತ್ರಿ ನಡೆದಿದೆ.

Vijaya Karnataka 6 Feb 2019, 5:00 am
ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಾವರೆಕೆರೆ ಗೇಟ್‌ ಬಳಿ ಭಾನುವಾರ ರಾತ್ರಿ ನಡೆದಿದೆ.
Vijaya Karnataka Web car crashes to bike riders death
ಬೈಕ್‌ಗೆ ಕಾರು ಡಿಕ್ಕಿ: ಸವಾರ ಸಾವು


ಸುಭಾಷ್‌ನಗರದ ನಿವಾಸಿ ಎ.ಜೆ. ಅಹ್ಮದ್‌ ಆಶ್ರಫಿ ಎಂಬವರ ಪುತ್ರ ಜಿಬ್ರಾನ್‌ ಹುಸೇನ್‌(18)ಮೃತರು. ಜಿಬ್ರಾನ್‌ ತನ್ನ ಕೆಟಿಎಂ ಬೈಕ್‌ನಲ್ಲಿ ಸ್ನೇಹಿತರೊಂದಿಗೆ ಚಾಮುಂಡಿಬೆಟ್ಟಕ್ಕೆ ಹೋಗಿ ವಾಪಸ್‌ ಬರುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಮಾರುತಿ 800 ಕಾರು ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್‌ ಸವಾರ ಜಿಬ್ರಾನ್‌ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಿದ್ದಾರ್ಥನಗರ ಸಂಚಾರ ಠಾಣೆಯ ಇನ್ಸ್‌ಪೆಕ್ಟರ್‌ ಅರುಣಕುಮಾರಿ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ