ಮೈಸೂರು: ಮೈಸೂರು ಡಿಸಿಯಾಗಿದ್ದ ಬಿ. ಶರತ್ ಅವರನ್ನು ಅವಧಿಗೆ ಮುನ್ನ ದಿಢೀರ್ ವರ್ಗಾವಣೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ಸಿಎಟಿ, ಅಂತಿಮ ಆದೇಶವನ್ನು ಕಾಯ್ದಿರಿಸಿದೆ. ಪ್ರಕರಣದ ಕುರಿತಾಗಿ ಕಳೆದ ಡಿಸೆಂಬರ್ 15ರಂದೂ ಸಿಎಟಿ ವಿಚಾರಣೆ ನಡೆಸಿತ್ತು. ವರ್ಗಾವಣೆ ಆದೇಶ ರದ್ದು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಡಿಸೆಂಬರ್ 22ರ ಡೆಡ್ಲೈನ್ ಕೂಡಾ ನೀಡಿತ್ತು. ಆದ್ರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಗುರುವಾರ ಮತ್ತೆ ವಿಚಾರಣೆ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಕಳೆದ ಕೆಲವು ತಿಂಗಳ ಹಿಂದೆ ಮೈಸೂರು ಡಿಸಿಯಾಗಿ ಶರತ್ ಅವರನ್ನು ನೇಮಕ ಮಾಡಲಾಗಿತ್ತು. ಆದ್ರೆ, ತಿಂಗಳು ತುಂಬುವ ಮುನ್ನವೇ ಶರತ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಶರತ್ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ಡಿಸಿಯಾಗಿ ನೇಮಕ ಮಾಡಿತ್ತು. ರಾಜ್ಯ ಸರ್ಕಾರದ ಈ ಆದೇಶ ಪ್ರಶ್ನಿಸಿ ಬಿ. ಶರತ್ ಅವರು ಸಿಎಟಿಯ ಮೊರೆ ಹೋಗಿದ್ದರು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಬ್ಯಾಟ್ ಬೀಸಿದ ಸಂಸದ ಪ್ರತಾಪ್ ಸಿಂಹ
2013ರಿಂದ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅರ್ಜಿದಾರ ಬಿ. ಶರತ್ ಅವರನ್ನು ಈವರೆಗೂ ಐದು ಬಾರಿ ವರ್ಗಾವಣೆ ಮಾಡಲಾಗಿದೆ ಎಂದು ಶರತ್ ಪರ ವಕೀಲರು ಸಿಎಟಿ ಗಮನಕ್ಕೆ ತಂದಿದ್ದರು. ರಾಜ್ಯ ಸರ್ಕಾರದ ಈ ಕ್ರಮ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಿದ್ದರು. ಕೂಡಲೇ ಸರ್ಕಾರ ತನ್ನ ವರ್ಗಾವಣೆ ಆದೇಶ ರದ್ದು ಮಾಡಬೇಕು ಸೂಚನೆ ನೀಡುವಂತೆ ಅರ್ಜಿದಾರರ ಪರ ವಕೀಲರು ಸಿಎಟಿಗೆ ಒತ್ತಾಯಿಸಿದ್ದರು.
ಡಿಸಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟ: ಜನಸ್ಪಂದನ ಕಾರ್ಯಕ್ರಮಕ್ಕೆ ಬ್ರೇಕ್
ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರು, ಆಡಳಿತ ಮುಖ್ಯಸ್ಥರ ವಿವೇಚನಾ ಅಧಿಕಾರ ಬಳಸಿ ಶರತ್ ಅವರ ವರ್ಗಾವಣೆ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ವಾದಿಸಿದರು. ಈ ಕುರಿತಾಗಿ ನಡೆದ ಸಮಗ್ರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮಂಡಳಿ, ಅಂತಿಮ ಆದೇಶವನ್ನು ಸದ್ಯ ಕಾಯ್ದಿರಿಸಿದ್ದು, ಎಲ್ಲರ ಚಿತ್ತ ಇದೀಗ ಈ ತೀರ್ಪಿನ ಮೇಲೆ ನೆಟ್ಟಿದೆ.
ರೋಹಿಣಿ ಸಿಂಧೂರಿ ಐಎಎಸ್ ಪಾಸ್ ಮಾಡಿದ್ದಾರೆ ಎಂಬುದೇ ಅನುಮಾನ: ರಘು ಆಚಾರ್
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಬ್ಯಾಟ್ ಬೀಸಿದ ಸಂಸದ ಪ್ರತಾಪ್ ಸಿಂಹ
2013ರಿಂದ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅರ್ಜಿದಾರ ಬಿ. ಶರತ್ ಅವರನ್ನು ಈವರೆಗೂ ಐದು ಬಾರಿ ವರ್ಗಾವಣೆ ಮಾಡಲಾಗಿದೆ ಎಂದು ಶರತ್ ಪರ ವಕೀಲರು ಸಿಎಟಿ ಗಮನಕ್ಕೆ ತಂದಿದ್ದರು. ರಾಜ್ಯ ಸರ್ಕಾರದ ಈ ಕ್ರಮ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಿದ್ದರು. ಕೂಡಲೇ ಸರ್ಕಾರ ತನ್ನ ವರ್ಗಾವಣೆ ಆದೇಶ ರದ್ದು ಮಾಡಬೇಕು ಸೂಚನೆ ನೀಡುವಂತೆ ಅರ್ಜಿದಾರರ ಪರ ವಕೀಲರು ಸಿಎಟಿಗೆ ಒತ್ತಾಯಿಸಿದ್ದರು.
ಡಿಸಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟ: ಜನಸ್ಪಂದನ ಕಾರ್ಯಕ್ರಮಕ್ಕೆ ಬ್ರೇಕ್
ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರು, ಆಡಳಿತ ಮುಖ್ಯಸ್ಥರ ವಿವೇಚನಾ ಅಧಿಕಾರ ಬಳಸಿ ಶರತ್ ಅವರ ವರ್ಗಾವಣೆ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ವಾದಿಸಿದರು. ಈ ಕುರಿತಾಗಿ ನಡೆದ ಸಮಗ್ರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಮಂಡಳಿ, ಅಂತಿಮ ಆದೇಶವನ್ನು ಸದ್ಯ ಕಾಯ್ದಿರಿಸಿದ್ದು, ಎಲ್ಲರ ಚಿತ್ತ ಇದೀಗ ಈ ತೀರ್ಪಿನ ಮೇಲೆ ನೆಟ್ಟಿದೆ.
ರೋಹಿಣಿ ಸಿಂಧೂರಿ ಐಎಎಸ್ ಪಾಸ್ ಮಾಡಿದ್ದಾರೆ ಎಂಬುದೇ ಅನುಮಾನ: ರಘು ಆಚಾರ್