ಆ್ಯಪ್ನಗರ

ಸಿಸಿಎಫ್‌ ಬಿ.ಎಂ.ಪರಮೇಶ್ವರ್‌ ನಿಧನ

ಬೆಂಗಳೂರಿನ ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ.ಪರಮೇಶ್ವರ್‌(59) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

Vijaya Karnataka 30 May 2018, 5:00 am
ಮೈಸೂರು: ಬೆಂಗಳೂರಿನ ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ.ಪರಮೇಶ್ವರ್‌(59) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
Vijaya Karnataka Web ccf bm parameshwar dead
ಸಿಸಿಎಫ್‌ ಬಿ.ಎಂ.ಪರಮೇಶ್ವರ್‌ ನಿಧನ


ಮೂಲತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಇವರು ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ 33 ವರ್ಷ ಸೇವೆ ಸಲ್ಲಿಸಿದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಆಗಮಿಸಿದ ಬಳಿಕ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹುಣಸೂರು ತಾಲೂಕಿನ ಕಾಕನಕೋಟೆಯಲ್ಲಿ ವೃತ್ತಿ ಆರಂಭಿಸಿದ್ದ ಪರಮೇಶ್ವರ್‌ ಅವರು, ಮೈಸೂರು ವೃತ್ತದಲ್ಲಿ ಸಿಸಿಎಫ್‌ ಆಗಿ ಎರಡು ವರ್ಷ, ಮಂಡ್ಯದಲ್ಲಿ ಡಿಸಿಎಫ್‌ ಜತೆಗೆ ಮೈಸೂರು ಮೃಗಾಲಯದಲ್ಲಿ ಪ್ರಭಾರ ಕಾರ‍್ಯನಿರ್ವಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮುಂಬರುವ ನವೆಂಬರ್‌ ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ