ಆ್ಯಪ್ನಗರ

ಶಾಲಾ ವಾಹನ ಹರಿದು ಮಗು ಸಾವು

ಕೃಷ್ಣರಾಜನಗರ ತಾಲೂಕು ಬಳ್ಳೂರು ಗ್ರಾಮದಲ್ಲಿ ಖಾಸಗಿ ಶಾಲಾ ವಾಹನ ಹರಿದು ನಾಲ್ಕು ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟನು.

Vijaya Karnataka 20 Jul 2019, 5:00 am
ಸಾಲಿಗ್ರಾಮ: ಕೃಷ್ಣರಾಜನಗರ ತಾಲೂಕು ಬಳ್ಳೂರು ಗ್ರಾಮದಲ್ಲಿ ಖಾಸಗಿ ಶಾಲಾ ವಾಹನ ಹರಿದು ನಾಲ್ಕು ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟನು.
Vijaya Karnataka Web child dies as school vehicle crashes
ಶಾಲಾ ವಾಹನ ಹರಿದು ಮಗು ಸಾವು


ಬಳ್ಳೂರು ಗ್ರಾಮದ ನಿವಾಸಿ ಗಣೇಶ್‌ ಎಂಬುವರ ಪುತ್ರ ಭರತ್‌ ಮೃತ ಮಗು. ''ನನ್ನ ಸಾಕು ಪುತ್ರ ಭರತ್‌ ಲಕ್ಷ್ಮೀಪುರ ಗ್ರಾಮದ ಹೊರವಲಯದಲ್ಲಿರುವ ಖಾಸಗಿ ಶಾಲೆಯಲ್ಲಿ ಎಲ್‌ಕೆಜಿ ಅಭ್ಯಾಸ ಮಾಡುತ್ತಿದ್ದ. ಮಗು ಶುಕ್ರವಾರ ಸಂಜೆ ತರಗತಿ ಮುಗಿಸಿಕೊಂಡು ಇದೇ ಶಾಲೆಯ ವಾಹನದಲ್ಲಿ ನಮ್ಮೂರಿನಲ್ಲಿ ಇಳಿಯುತ್ತಿದ್ದಾಗ ವಾಹನ ತರಾತುರಿಯಲ್ಲಿ ಮುಂದೆ ಸಾಗಿತು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮುಗ್ಗರಿಸಿ ಬಿದ್ದ ಮಗುವಿನ ಮೇಲೆ ಶಾಲಾ ವಾಹನದ ಹಿಂದಿನ ಚಕ್ರ ಹರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿತು'' ಎಂದು ಲಕ್ಷ್ಮೀಪುರ ಗ್ರಾ.ಪಂ.ಉಪಾಧ್ಯಕ್ಷ ರೂ ಆದ ಬಳ್ಳೂರು ನಿವಾಸಿ ರಾಜೇಗೌಡ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಶಾಲಾ ಆಡಳಿತ ಮಂಡಳಿಯು ನಿಯಮಾನುಸಾರ ವಾಹನಕ್ಕೆ ಸಿಬ್ಬಂದಿ ನೇಮಿಸದ ಕಾರಣ ಈ ಘಟನೆ ನಡೆದಿದ್ದು, ಶಾಲೆಯ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಮೃತ ಮಗುವಿನ ಪೋಷಕರು ಹಾಗೂ ಸಂಬಂಧಿಕರ ರೋದನ ಮುಗಿಲು ಮುಟ್ಟುವಂತಿತ್ತು. ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ