ಆ್ಯಪ್ನಗರ

ಸಿಐಟಿಯು ಪ್ರತಿಭಟನೆ

ಕನಿಷ್ಠ ವೇತನ ಜಾರಿ ಸೇರಿದಂತೆ ರಾಜ್ಯದ ಕಾರ್ಮಿಕರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ವಿಕ ಸುದ್ದಿಲೋಕ 19 Apr 2016, 5:00 am

-ಕನಿಷ್ಠ ವೇತನ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹ

ಮೈಸೂರು: ಕನಿಷ್ಠ ವೇತನ ಜಾರಿ ಸೇರಿದಂತೆ ರಾಜ್ಯದ ಕಾರ್ಮಿಕರ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

''2014ರ ಜನವರಿ 20ರಂದು ಸಿಐಟಿಯು ನಡೆಸಿದ ವಿಧಾನಸೌಧ ಚಲೋ ನಂತರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾರ್ಮಿಕ ವರ್ಗದ ಈ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ಆದರೆ ಈವರೆಗೆ ಭರವಸೆ ಈಡೇರಿಲ್ಲ. ಈ ಬಗ್ಗೆ ಕಾರ್ಮಿಕ ಸಚಿವರೂ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಿಲ್ಲ. ಹಾಗಾಗಿ ಕೂಡಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಸ್ಯೆಗೆ ಸ್ಪಂದಿಸಬೇಕು'' ಎಂದು ಒತ್ತಾಯಿಸಿದರು.

''ಗುತ್ತಿಗೆ ಕಾರ್ಮಿಕರು ಮತ್ತು ಟ್ರೈನಿಗಳ ಕೆಲಸದ ಕಾಯಂಗೆ ತಮಿಳುನಾಡು ಮಾದರಿ ಶಾಸನ ರೂಪಿಸಬೇಕು. ರಾಜ್ಯವ್ಯಾಪಿ ಕನಿಷ್ಠ ವೇತನ 18,000 ರೂ. ನಿಗದಿಪಡಿಸಬೇಕು. ಅಧಿಸೂಚಿತ ಪರಿಷ್ಕೃತ ಕನಿಷ್ಠ ವೇತನ ಮತ್ತು ಬೋನಸ್‌ ಕಾಯಿದೆ ತಿದ್ದುಪಡಿ ಜಾರಿಯಾಗಬೇಕು. ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಕನಿಷ್ಠ ವೇತನ ಮತ್ತು ಪಾವತಿ ಕ್ಲೇಮ್‌ ಸಲ್ಲಿಸಲು ಅಧಿಸೂಚನೆ ಹೊರಡಿಸಬೇಕು. ಹಮಾಲಿ ಹಾಗೂ ಆಟೋ ರಿಕ್ಷಾ ಮತ್ತು ಮನೆ ಕೆಲಸಗಾರರು ಸೇರಿದಂತೆ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಭವಿಷ್ಯ ನಿಧಿ ಮತ್ತು ಪಿಂಚಣಿ ಯೋಜನೆ ಜಾರಿಗೊಳಿಸಬೇಕು'' ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಎನ್‌.ಕೆ.ಬಾಲಾಜಿರಾವ್‌, ಪ್ರಧಾನ ಕಾರ್ಯದರ್ಶಿ ಜಿ.ಜಯರಾಮ್‌ ರಾಜೇಂದ್ರ, ಮಹದೇವಪ್ಪ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ