ಕೊರೊನಾ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು 24×7 ಕೆಲಸ ಮಾಡುತ್ತಿದ್ದಾರೆ : ಸಚಿವ ಸೋಮಶೇಖರ್
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳು 24×7 ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ದಸರಾ ಸಹಿತ ಯಾವುದೇ ಕಾರ್ಯಗಳತ್ತ ಒತ್ತು ಕೊಡದೆ ಜನರ ಆರೋಗ್ಯದ ಕಡೆ ನಿಗಾ ವಹಿಸುತ್ತಿದ್ದ್ದಾದೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
Vijaya Karnataka Web 15 Aug 2020, 7:49 pm
ಮೈಸೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳು 24×7 ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಅದಕ್ಕಾಗಿಯೇ ಮೈಸೂರಿನಲ್ಲಿ ದಸರಾ ಸಹಿತ ಯಾವುದೇ ಕಾರ್ಯಗಳತ್ತ ಒತ್ತು ಕೊಡದೆ ಜನರ ಆರೋಗ್ಯ ಕಾಪಾಡುವ ಸಲುವಾಗಿ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಏನೇ ಸಮಸ್ಯೆ ಇದ್ದರೆ ನಾವು ಬಗೆಹರಿಸುತ್ತೇವೆ. ಅಧಿಕಾರಿಗಳು ಸಹ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಕಳೆದ ಕೆಲವು ದಿನಗಳಿಂದೀಚೆಗೆ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆಯ ಮಾಹಿತಿ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ಸಂಗ್ರಹಿಸಿದರು.
ಇದೇ ವೇಳೆ ಮಾತನಾಡಿ, ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾತನಾಡುತ್ತಾರೆ. ಇಲ್ಲವೇ ಶಾಸಕರು ಮಾತನಾಡುತ್ತಾರೆ. ಆದರೆ, ಅಧಿಕಾರಿಗಳು ಬಹಳ ನಿಧಾನಗತಿ ಧೋರಣೆ ತಾಳುತ್ತಿದ್ದು, ಇದು ಸರಿಯಲ್ಲ. ಇನ್ನು ಮುಂದೆ ಅಧಿಕಾರಿಗಳೇ ಸ್ವಯಂಪ್ರೇರಿತರಾಗಿ ಸಭೆಯಲ್ಲಿ ಆಯಾ ವಿಷಯಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕೊಡಬೇಕು. ಎಲ್ಲರೂ ಸೇರಿ ಕೆಲಸ ಮಾಡಿದರೆ ಮಾತ್ರ ಜಿಲ್ಲಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ತಿಳಿಸಿದರು.
ಎಸ್ಡಿಪಿಐ ಮತ್ತು ಪಿಎಫ್ಐ ನಿಷೇಧಕ್ಕೆ ಅಡ್ಡಗೋಡೆ ಮೇಲೆ ದೀಪ ಇಟ್ಟ ತನ್ವೀರ್ ಸೇಠ್!
ಈ ನಡುವೆ ಆಸ್ಪತ್ರೆಗಳಲ್ಲಿ ದೂರುಗಳು ಕೇಳಿ ಬರುತ್ತಿದೆ. ಆ ಮಾಹಿತಿಗಳನ್ನು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ ತಮ್ಮ ಗಮನಕ್ಕೆ ತಂದರೆ ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗುವುದ. ಕೋವಿಡ್ ಸೋಂಕಿತರಿಗೆ ಮಾನಸಿಕ ಬಲ ತುಂಬುವ ಕೆಲಸ ಆಗಬೇಕು. ಆಸ್ಪತ್ರೆಯ ಒಂದು ಆವರಣದಲ್ಲಿ ದಿನಕ್ಕೊಮ್ಮೆ ಎಲ್ಲ ಸೋಂಕಿತರನ್ನು ಕರೆಸಿ ಅವರಿಗೆ ಪಿಪಿಇ ಕಿಟ್ ಧರಿಸಿದ ಯೋಗ ಶಿಕ್ಷಕರಿಂದ ಯೋಗಾಭ್ಯಾಸ ಮಾಡಿಸುವುದು, ತಜ್ಞ ವೈದ್ಯರಿಂದ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ಕೊಡಿಸುವಂತಹ ಕೆಲಸ ಆಗಬೇಕು ಎಂದು ಸೂಚಿಸಿದರು.
ಕಳೆದ ಕೆಲವು ದಿನಗಳಿಂದೀಚೆಗೆ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆಯ ಮಾಹಿತಿ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ಸಂಗ್ರಹಿಸಿದರು.
ಇದೇ ವೇಳೆ ಮಾತನಾಡಿ, ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾತನಾಡುತ್ತಾರೆ. ಇಲ್ಲವೇ ಶಾಸಕರು ಮಾತನಾಡುತ್ತಾರೆ. ಆದರೆ, ಅಧಿಕಾರಿಗಳು ಬಹಳ ನಿಧಾನಗತಿ ಧೋರಣೆ ತಾಳುತ್ತಿದ್ದು, ಇದು ಸರಿಯಲ್ಲ. ಇನ್ನು ಮುಂದೆ ಅಧಿಕಾರಿಗಳೇ ಸ್ವಯಂಪ್ರೇರಿತರಾಗಿ ಸಭೆಯಲ್ಲಿ ಆಯಾ ವಿಷಯಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕೊಡಬೇಕು. ಎಲ್ಲರೂ ಸೇರಿ ಕೆಲಸ ಮಾಡಿದರೆ ಮಾತ್ರ ಜಿಲ್ಲಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ತಿಳಿಸಿದರು.
ಎಸ್ಡಿಪಿಐ ಮತ್ತು ಪಿಎಫ್ಐ ನಿಷೇಧಕ್ಕೆ ಅಡ್ಡಗೋಡೆ ಮೇಲೆ ದೀಪ ಇಟ್ಟ ತನ್ವೀರ್ ಸೇಠ್!
ಈ ನಡುವೆ ಆಸ್ಪತ್ರೆಗಳಲ್ಲಿ ದೂರುಗಳು ಕೇಳಿ ಬರುತ್ತಿದೆ. ಆ ಮಾಹಿತಿಗಳನ್ನು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ ತಮ್ಮ ಗಮನಕ್ಕೆ ತಂದರೆ ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗುವುದ. ಕೋವಿಡ್ ಸೋಂಕಿತರಿಗೆ ಮಾನಸಿಕ ಬಲ ತುಂಬುವ ಕೆಲಸ ಆಗಬೇಕು. ಆಸ್ಪತ್ರೆಯ ಒಂದು ಆವರಣದಲ್ಲಿ ದಿನಕ್ಕೊಮ್ಮೆ ಎಲ್ಲ ಸೋಂಕಿತರನ್ನು ಕರೆಸಿ ಅವರಿಗೆ ಪಿಪಿಇ ಕಿಟ್ ಧರಿಸಿದ ಯೋಗ ಶಿಕ್ಷಕರಿಂದ ಯೋಗಾಭ್ಯಾಸ ಮಾಡಿಸುವುದು, ತಜ್ಞ ವೈದ್ಯರಿಂದ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ಕೊಡಿಸುವಂತಹ ಕೆಲಸ ಆಗಬೇಕು ಎಂದು ಸೂಚಿಸಿದರು.