ಆ್ಯಪ್ನಗರ

ಸಿಎಂ ಸಭೆಗೆ ಆಹ್ವಾನವಿಲ್ಲದಿದ್ದರೂ ಪಾಲ್ಗೊಳ್ಳುವೆ: ಕುರುಬೂರು

ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಕರೆದಿರುವ ಸಭೆಗೆ ತಮಗೆ ಆಹ್ವಾನ ಇಲ್ಲ. ಆದರೂ, ತಾವು ಈ ಸಭೆಯಲ್ಲಿ ಪಾಲ್ಗೊಂಡು ರೈತರ ಹಕ್ಕೊತ್ತಾಯವನ್ನು ಮಂಡಿಸುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.

Vijaya Karnataka 20 Nov 2018, 9:22 pm
ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಕರೆದಿರುವ ಸಭೆಗೆ ತಮಗೆ ಆಹ್ವಾನ ಇಲ್ಲ. ಆದರೂ, ತಾವು ಈ ಸಭೆಯಲ್ಲಿ ಪಾಲ್ಗೊಂಡು ರೈತರ ಹಕ್ಕೊತ್ತಾಯವನ್ನು ಮಂಡಿಸುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.
Vijaya Karnataka Web cm meeting
ಸಿಎಂ ಸಭೆಗೆ ಆಹ್ವಾನವಿಲ್ಲದಿದ್ದರೂ ಪಾಲ್ಗೊಳ್ಳುವೆ: ಕುರುಬೂರು


ಕಬ್ಬು ಬೆಳೆಗಾರರ ಬೇಡಿಕೆಗಳ ಬಗ್ಗೆ ತಮ್ಮ ಸಂಘಟನೆ ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದೆ. ಆದರೂ, ಸಿಎಂ ಕುಮಾರಸ್ವಾಮಿ ತಮ್ಮನ್ನು ಸಭೆಗೆ ಆಹ್ವಾನಿಸಿಲ್ಲ. ಆದರೂ, ಕಬ್ಬು ಬೆಳೆಗಾರರು ತಮ್ಮನ್ನು ಸಭೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ, ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ ತಿಳಿಸುತ್ತೇನೆ ಎಂದು ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುತೇಕ ಸಕ್ಕರೆ ಕಾರ್ಖಾನೆಗಳು ಶಾಸಕರು, ಸಂಸದರು, ಸಚಿವರ ಮಾಲೀಕತ್ವದಲ್ಲಿರುವ ಕಾರಣ ಕಬ್ಬು ಬೆಳೆಗಾರರು ಕಬ್ಬಿನ ಹಣಕ್ಕಾಗಿ ಪ್ರತಿ ವರ್ಷ ಸಂಕಷ್ಟ ಅನುಭವಿಸುವಂತಾಗಿದೆ. ಅದಕ್ಕಾಗಿ ಕಬ್ಬು ಖರೀದಿ ನಿಯಂತ್ರಣ ಎಸ್‌ಎಪಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ಕಬ್ಬಿನ ಬಾಕಿ ಕೊಡದ ಕಾರ್ಖಾನೆಗಳಿಗೆ ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಬೇಕೆಂದು ಕುರುಬೂರು ಶಾಂತಕುಮಾರ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಸಕ್ಕರೆ ಕಾರ್ಖಾನೆಗಳು ಸುಳ್ಳು ಮಾಹಿತಿಯನ್ನು ನೀಡಿ ಯಾವುದೇ ಬಾಕಿ ಇಲ್ಲ ಎಂದು ವರದಿ ನೀಡುತ್ತಿವೆ. ಇದನ್ನು ಜಿಲ್ಲಾಡಳಿತ ಹಾಗೂ ಸಕ್ಕರೆ ಆಯುಕ್ತರು ಪರಿಶೀಲಿಸದೇ ಕಾರ್ಖಾನೆ ಬಾಕಿ ಇಲ್ಲ ಎನ್ನುವ ದೃಢೀಕರಣ ನೀಡುತ್ತಿದ್ದಾರೆ. ತಪ್ಪು ಮಾಹಿತಿ ನೀಡಿರುವ ಕಾರ್ಖಾನೆ ಮಾಲೀಕರ ವಿರುದ್ಧ ಕೂಡಲೇ ಕ್ರಿಮಿನಲ್‌ಮೊಕದ್ದಮೆ ದಾಖಲಿಸಬೇಕು. ಇದರಿಂದ ಮುಂದೆ ಯಾರೂ ತಪ್ಪು ಮಾಹಿತಿಯನ್ನು ನೀಡುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕು. ಬಾಕಿ ಉಳಿಸಿಕೊಂಡ ಕಾರ್ಖಾನೆಗಳನ್ನು ಸರಕಾರವೇ ಬಂದ್‌ ಮಾಡಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯಾದ್ಯಂತ 16 ಲಕ್ಷ ಹೆಕ್ಕೇರ್‌ ಪ್ರದೇಶದಲ್ಲಿ ಭತ್ತ ಬೆಳೆದಿದ್ದು ಭತ್ತದ ಬೆಲೆ ಕುಸಿಯುತ್ತಿದೆ. ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್‌ಗೆ 2 ಸಾವಿರ ರೂ. ನಿಗದಿಪಡಿಸಿ ರಾಜ್ಯ ಸರಕಾರವೇ ಖರೀದಿ ಕೇಂದ್ರಗಳನ್ನು ತೆರೆದು ಖರೀದಿಸಲು ಮುಂದಾಗಬೇಕು. ರೈತ ಹೋರಾಟಗಾರರ ಮೇಲೆ ಮೊಕದ್ದಮೆಗಳನ್ನು ದಾಖಲಿಸಿ ಚಳವಳಿಗಳನ್ನು ಹತ್ತಿಕ್ಕಲು ಯತ್ನಿಸುವುದು ಸರಿಯಲ್ಲ. ಕೂಡಲೇ ಎಲ್ಲ ಮೊಕದ್ದಮೆಗಳನ್ನು ವಾಪಸ್‌ ಪಡೆಯಬೇಕು ಎಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ