ಆ್ಯಪ್ನಗರ

ಇಂದಿನಿಂದ 3 ಜಿಲ್ಲೆಯಲ್ಲಿ ಸಿಎಂ ಪ್ರವಾಸ

Vijaya Karnataka Web 17 Oct 2018, 5:00 am
ಮೈಸೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಅ. 17 ರಿಂದ 19 ರವರೆಗೆ ಮೈಸೂರು, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Vijaya Karnataka Web cm tour in 3 district from today
ಇಂದಿನಿಂದ 3 ಜಿಲ್ಲೆಯಲ್ಲಿ ಸಿಎಂ ಪ್ರವಾಸ


17ರಂದು ಬೆಳಗ್ಗೆ 9ಕ್ಕೆ ಕೊಡಗು ಜಿಲ್ಲೆಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ರಾತ್ರಿ 10ಕ್ಕೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡುವರು. ಅ.18 ರಂದು ಬೆಳಗ್ಗೆ 8ಕ್ಕೆ ಮೈಸೂರಿನ ಹೆಬ್ಬಾಳ ಕೆರೆ ವೀಕ್ಷಿಸುವರು. ಸಂಜೆ 4.30ಕ್ಕೆ ಮಂಡ್ಯ ಜಿಲ್ಲೆಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡುವರು.

ಅ.19 ರಂದು ಬೆಳಗ್ಗೆ 9ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡುವರು. ಮಧ್ಯಾಹ್ನ 2.30ಕ್ಕೆ ಅರಮನೆ ಆವರಣದ ಬಲರಾಮ ದ್ವಾರದ ಬಳಿ ದಸರಾ ಜಂಬೂಸವಾರಿ ಉತ್ಸವದ ಅಂಗವಾಗಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವರು. ಮಧ್ಯಾಹ್ನ 3.40ಕ್ಕೆ ಅರಮನೆ ಒಳ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟಿಸಿ,ವೀಕ್ಷಿಸುವರು. ರಾತ್ರಿ 7ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ರಾತ್ರಿ 10.30ಕ್ಕೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ