ಆ್ಯಪ್ನಗರ

ಚಾಮುಂಡಿ ಬೆಟ್ಟಕ್ಕಾಗಮಿಸಿದ ಸಿಎಂ ಯಡಿಯೂರಪ್ಪಗೆ ಜಿ ಟಿ ದೇವೇಗೌಡರ ಸ್ವಾಗತ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು.

Vijaya Karnataka Web 29 Aug 2019, 12:20 pm
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು, ಮಾಜಿ ಸಚಿವ ಜಿ ಟಿ ದೇವೇಗೌಡರು ಸ್ವಾಗತಿಸಿದರು.
Vijaya Karnataka Web bsy


ಈ ವೇಳೆ ನೂತನ ಸಚಿವರಾದ ಆರ್ ಅಶೋಕ್, ವಿ ಸೋಮಣ್ಣ ಸೇರಿದಂತೆ ಬಿಜೆಪಿ ನಾಯಕರಾದ ಪ್ರತಾಪ ಸಿಂಹ್ ಹಾಗೂ ಎ ರಾಮದಾಸ್ ಉಪಸ್ಥಿತರಿದ್ದರು.

ಸಿಎಂ ಆಗಮಿಸುತ್ತಿದ್ದಂತೆ ದೇವಸ್ಥಾನದ ಒಳಗಡೆ ಹೋಗಲು ಮುಖಂಡರು ಹಾಗೂ ಕಾರ್ಯಕರ್ತರ ನೂಕುನುಗ್ಗಲು ಉಂಟಾಗಿದ್ದು, ಜಿ.ಪಂ ಮಹಿಳಾ ಸದಸ್ಯರೊಬ್ಬರ ಕೈಗೆ ಪೆಟ್ಟಾಗಿದೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು.


ಕ್ಷೇತ್ರದ ಶಾಸಕನಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸ್ವಾಗತ ಮಾಡಿದ್ದೇನೆ. ಬಿಎಸ್‌ವೈ ಸಿಎಂ ಆದ ಕೂಡಲೇ ಉತ್ತಮ ಮಳೆ ಬೆಳೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿವೆ ಎಂದು ಜಿ ಟಿ ದೇವೇಗೌಡ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ