ಆ್ಯಪ್ನಗರ

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ; ಸಿದ್ದರಾಮಯ್ಯ

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧದ ಹೋರಾಟದ ಕುರಿತಾಗಿ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka Web 30 Jul 2020, 1:21 pm
ಬೆಂಗಳೂರು: ಭೂಸುಧಾರಣಾ ಕಾಯ್ದೆ ತಿದ್ದುಪಡಿಯ ವಿರುದ್ಧವಾಗಿ ಹೋರಾಟ ರೂಪಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನ ಅಭಿಪ್ರಾಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web dk press


ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಮೊದಲು ಭ್ರಷ್ಟಾಚಾರದ ವಿರುದ್ಧ ಹೋರಾಟ, ನಂತರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯ ವಿರುದ್ಧ ಹೋರಾಟ ರೂಪಿಸಲಾಗುವುದು. ಈ ವಿಚಾರವಾಗಿ ಪಕ್ಷದ ಆಂತರಿಕ ವಲಯದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದರು.

ಕಾಂಗ್ರೆಸ್ ರಾಜ್ಯಸಭಾ ಸಂಸದರೊಂದಿಗೆ ಸೋನಿಯಾ ಗಾಂಧಿ ವಿಡಿಯೋ ಕಾನ್ಫರೆನ್ಸ್: ಕೋವಿಡ್ ಚರ್ಚೆ!

ಪಕ್ಷದ ವೇದಿಕೆಯಲ್ಲೂ ಕಾಯ್ದೆ ತಿದ್ದುಪಡಿಯ ವಿರುದ್ಧವಾಗಿ ಹೋರಾಟ ರೂಪಿಸುವ ಕುರಿತಾಗಿ ಚರ್ಚೆ ನಡೆದಿದೆ. ನಾನೂ ಪಕ್ಷದ ಭಾಗವಾಗಿಯೇ ವಿವಿಧ ಸಂಘಟನೆಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದೇನೆ. ಬೀದಿ ಹೋರಾಟದ ಜೊತೆಗೆ ಕಾನೂನಾತ್ಮಕ ಹೋರಾಟ ರೂಪಿಸುವ ನಿಟ್ಟಿನಲ್ಲಿ ಹೆಜ್ಜೆ ಇಡಲಾಗುವುದು ಎಂದರು.

ಲೆಕ್ಕಕೊಡಿ ಬೇಡಿಕೆ ಆದೇಶ ಅಲ್ಲ

ಕೋವಿಡ್‌ ಚಿಕಿತ್ಸಾ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಲೆಕ್ಕಕೊಡಿ ಎಂಬುವುದು ವಿರೋಧ ಪಕ್ಷವಾಗಿ ನಮ್ಮ ಬೇಡಿಕೆ ಹೊರತು ಆದೇಶವಲ್ಲ. ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಮುಂದೆ ಲೆಕ್ಕಕೊಡಿ ಎಂದು ಬೇಡಿಕೆ ಇಟ್ಟಿದ್ದೇನೆ ಹೊರತು ಆದೇಶ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸಿಇಟಿ ಪರೀಕ್ಷೆ ನಿರಾತಂಕ; ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಸಿ.ಎನ್ ಅಶ್ವತ್ಥನಾರಾಯಣ

ಸಿದ್ದರಾಮಯ್ಯ ಮನವಿ ಮಾಡಬಹುದೇ ಹೊರತು ಆದೇಶ ಮಾಡುವ ಹಾಗಿಲ್ಲ ಎಂದು ಸಚಿವ ಆರ್‌. ಅಶೋಕ್ ನೀಡಿದ್ದ ಹೇಳಿಕೆಗೆ ಸಿದ್ದರಾಮಯ್ಯ ಮೈಸೂರಿನಲ್ಲಿ ಈ ರೀತಿ ತಿರುಗೇಟು ನೀಡಿದರು.

ರಾಜ್ಯ ಸರ್ಕಾರಕ್ಕೆ ಕೋವಿಡ್‌ ಸಂದರ್ಭದಲ್ಲಿ ಮೂರು ತಿಂಗಳು ಸಹಕಾರ ಕೊಟ್ಟಿದ್ದೇವೆ, ಆದರೆ ಲೂಟಿ ಹೊಡೆಯಲು ನಮ್ಮ ಸಹಕಾರ ಇಲ್ಲ. ಕೊರೊನಾದ ನಡುವೆ ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಯಾವ ರೀತಿಯ ರಾಜಕೀಯ ಬಿಜೆಪಿ ಮಾಡ್ತಾ ಇದೆ ಎಂಬುವುದು ತಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ