ಆ್ಯಪ್ನಗರ

‘ಡಿಕೆಶಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ’ ! ಸಿದ್ದು ಪುತ್ರನ ಮಾತಿನ ಮರ್ಮವೇನು

ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿಕೆ ನೀಡಿರುವುದು ಕುತೂಹಲ ಸೃಷ್ಟಿಸಿದೆ. ಸಿಎಂ ಪುತ್ರ ಯತೀಂದ್ರ ಹೇಳಿಕೆಯ ಮರ್ಮವೇನು ಎಂಬುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Vijaya Karnataka Web 7 Nov 2019, 4:15 pm
ಮೈಸೂರು: 'ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ ಅವರ ಜೊತೆಗೆ ನಾವು ಇರುತ್ತೇವೆ' ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವನ್ನು ಡಿಕೆಶಿ ಮುನ್ನಡೆಸಬೇಕು ಎಂದು ಹೇಳಿಕೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.
Vijaya Karnataka Web congress leader siddaramaiah son backs dk shivakumar
‘ಡಿಕೆಶಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ’ ! ಸಿದ್ದು ಪುತ್ರನ ಮಾತಿನ ಮರ್ಮವೇನು


ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಶೀತಲ ಸಮರದ ಕುರಿತಾಗಿ ಚರ್ಚೆಗಳು ನಡೆಯುತ್ತಿವೆ. ಬಹಿರಂಗವಾಗಿ ತಮ್ಮಬ್ಬರ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಉಭಯ ನಾಯಕರು ಹೇಳುತ್ತಿದ್ದರೂ ಆಂತರಿಕವಾಗಿ ನಡೆಯುತ್ತಿರುವ ತಿಕ್ಕಾಟ ಗೌಪ್ಯವಾಗಿ ಉಳಿದಿಲ್ಲ.

ನಾವೇನು ಬಿಜೆಪಿಗೆ ಜೆಡಿಎಸ್ ಬರೆದುಕೊಟ್ಟಿಲ್ಲ; ಬಿಜೆಪಿ ಬೆಂಬಲಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ: ಕಾಂಗ್ರೆಸ್‌ ವಿರುದ್ಧ ರೇವಣ್ಣ ಕಿಡಿ

ಸಮ್ಮಿಶ್ರ ಸರಕಾರದ ಅವಧಿಯಲ್ಲೂ ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿಸಲು ಸಿದ್ದರಾಮಯ್ಯ ಬಣ ಆಸಕ್ತಿ ತೋರಿಸದಿದ್ದ ಸಂದರ್ಭದಲ್ಲಿ ಡಿಕೆಶಿ ಸರಕಾರ ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದರು. ಹೀಗೆ ಕೆಲವೊಂದು ವಿಚಾರಗಳಲ್ಲಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡೆಯ ಕುರಿತಾಗಿ ಅಸಮಾಧಾನ ಹೊಂದಿದ್ದರು. ಇತ್ತೀಚೆಗೆ ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರು. ಇಬ್ಬರು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾದರೆ ಕಾಂಗ್ರೆಸ್ ಗೆಲುವು ಖಚಿತ ಎಂದು ಹೇಳಿಕೆ ನೀಡಿದ್ದರು.

ಎಚ್ಡಿಕೆ ಬಿಜೆಪಿಗೆ ಜೆಡಿಎಸ್‌ ಬರ್ಕೊಡುತ್ತೇನೆ ಎಂದಿಲ್ಲ: ರೇವಣ್ಣ

ಈ ನಡುವೆ ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ನಡೆದ ಸ್ವಾಗತ ಮೆರವಣಿಗೆಯ ಸಂದರ್ಭದಲ್ಲಿ ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದಕ್ಕೆ ಸಿದ್ದರಾಮಯ್ಯ ಅಸಮಧಾನಗೊಂಡಿದ್ದರು.

ಆಪ್ತರ ಜೊತೆಗೆ ಚರ್ಚೆ ನಡೆಸುತ್ತಿದ್ದ ಸಂದರ್ಭದದಲ್ಲಿ ಡಿಕೆಶಿ ಕುರಿತಾಗಿ ಅಸಮಾಧಾನ ತೋಡಿಕೊಂಡ ಮಾತುಕತೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಿದ್ದರಾಮಯ್ಯ ವರ್ತನೆಗೆ ಸ್ವತಃ ಅವರ ಪುತ್ರ ಶಾಸಕ ಡಾ. ಯತೀಂದ್ರ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗುತ್ತಿದೆ.

ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದು ಆದರೆ ಸಿದ್ದರಾಮಯ್ಯ ಬಣ ಇದನ್ನು ಒಪ್ಪಿಕೊಳ್ಳಲು ಸಿದ್ದವಿಲ್ಲ ಎನ್ನಲಾಗುತ್ತಿದೆ. ಹೈ ಕಮಾಂಡ್ ಕೂಡಾ ಡಿಕೆಶಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದ್ದು ಯಾವ ಸ್ಥಾನಮಾನ ನೀಡಲಾಗುತ್ತದೆ ಎಂಬುವುದನ್ನು ಇನ್ನೂ ಖಚಿತಪಡಿಸಿಲ್ಲ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಮೈಸೂರು ರೈಲ್ವೇ ನಿಲ್ದಾಣದಿಂದ ಕಾಂಗ್ರೆಸ್ ಕಚೇರಿಯವರೆಗೂ ಡಿಕೆಶಿಯನ್ನು ಕಾರ್ಯಕರ್ತರು ಹಾಗೂ ಬೆಂಬಲಿಗರು ಮೆರವಣಿಗೆಯಲ್ಲಿ ಕರೆದೊಯ್ದರು. ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕ ಡಾ. ಯತೀಂದ್ರ ಡಿಕೆ ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡಿರುವುದು ಕುತೂಹಲ ಕೆರಳಿಸಿದೆ. ಸಿದ್ದು ಪುತ್ರನ ಮಾತಿನ ಮರ್ಮ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ