ಆ್ಯಪ್ನಗರ

ಮೈಸೂರಿನಲ್ಲಿ ಏರುಗತಿಯಲ್ಲಿ ಸಾಗುತ್ತಲೇ ಇದೆ ಕೊರೊನಾ ಸೋಂಕು: ಸಾರ್ವಜನಿಕರಲ್ಲಿ ಆತಂಕ!

ಮೈಸೂರು ಜಿಲ್ಲೆಯಲ್ಲಿ ಕೋವಿಡ್‌–19ನಿಂದ ಇಂದು(ಗುರುವಾರ) ಸಹ ಮತ್ತೆರಡು ಸಾವು ಸಂಭವಿಸಿದ್ದು, ಮೃತರ ಒಟ್ಟು ಸಂಖ್ಯೆ 16ಕ್ಕೆ ಏರಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 52 ಕೋವಿಡ್‌ ಪ್ರಕರಣಗಳು ದಾಖಲಾಗಿವೆ.

Vijaya Karnataka Web 9 Jul 2020, 10:49 pm
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್‌–19ನಿಂದ ಇಂದು(ಗುರುವಾರ) ಸಹ ಮತ್ತೆರಡು ಸಾವು ಸಂಭವಿಸಿದ್ದು, ಮೃತರ ಒಟ್ಟು ಸಂಖ್ಯೆ 16ಕ್ಕೆ ಏರಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 52 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಈ ಮಧ್ಯೆ ಇದುವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 641ಕ್ಕೇರಿದ್ದು, 14 ಮಂದಿ ಚೇತರಿಸಿಕೊಂಡಿದ್ದಾರೆ.
Vijaya Karnataka Web mysuru disinfectant
ಸಂಗ್ರಹ ಚಿತ್ರ


ಇಬ್ಬರು ಗರ್ಭಿಣಿಯರು, 11 ಜನ ಆರೋಗ್ಯ ಕಾರ್ಯಕರ್ತರು, 11 ಮಂದಿ ಪ್ರಾಥಮಿಕ ಸಂಪರ್ಕಿತರು, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 12 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 9 ಮಂದಿ, ಅಂತಾರಾಜ್ಯ ಹಾಗೂ ಬೇರೆ ಜಿಲ್ಲೆಯಿಂದ ಬಂದ 7 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮೈಸೂರಿನ ಅಂಬಾವಿಲಾಸ ಅರಮನೆಗೂ ವಕ್ಕರಿಸಿದ ಕೊರೊನಾ ವೈರಸ್‌!

ಸದ್ಯ ಜಿಲ್ಲೆಯಲ್ಲಿ 2,645 ಮಂದಿಯನ್ನು 14 ದಿನಗಳ ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಇದುವರೆಗೆ ಒಟ್ಟು 25,333 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿನ ಕಂಟೈನ್‌ಮೆಂಟ್‌ ವಲಯಗಳ ಸಂಖ್ಯೆಯೂ ಏರಿಕೆ ಆಗಿದೆ. ಇಂದು ಹೊಸದಾಗಿ 34 ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಈ ನಡುವೆ ಕೋವಿಡ್‌ ಆಸ್ಪತ್ರೆಯಲ್ಲಿ ಈಗಾಗಲೇ ಬಹುತೇಕ ಭರ್ತಿಯಾಗಲಿದೆ. ಈ ನೂತನ ಜಿಲ್ಲಾಸ್ಪತ್ರೆಯು ಕೇವಲ 250 ಹಾಸಿಗೆ ಸಾಮರ್ಥ್ಯವನ್ನಷ್ಟೇ ಹೊಂದಿದ್ದು ಈ ಆಸ್ಪತ್ರೆಯ ಬೆಡ್ ಭರ್ತಿಯಾಗುವ ಹಿನ್ನೆಲೆ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, ಮಾಧ್ಯಮಗಳಿಗೆ ಈ ಬಗ್ಗೆ ಸ್ಪಷ್ಟಪಡಿಸಿಲ್ಲ.

ಸೋಂಕಿತರ ಹೆಚ್ಚಳ ಹಿನ್ನೆಲೆ 5 ದಿನಗಳ ಚಾಮುಂಡಿಬೆಟ್ಟಕ್ಕಿಲ್ಲ ಪ್ರವೇಶ :

ನಾಳೆ ಚಾಮುಂಡಿ ವರ್ಧಂತಿ ಹಾಗೂ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ದೇವಾಲಯಗಳಿಗೆ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ಆದೇಶ ಹೊರಡಿಸಿದ್ದಾರೆ.

ಮೈಸೂರು ಪಾಲಿಕೆ ಸಿಬ್ಬಂದಿಗೆ ಕೊರೊನಾ ಸೋಂಕು: ಆಯುಕ್ತರೂ ಸೇರಿ 14 ಮಂದಿಗೆ ಕ್ವಾರಂಟೈನ್‌..

ನಾಳೆ ಮೂರನೇ ಆಷಾಢ ಶುಕ್ರವಾರದ ಜೊತೆಗೆ ವಾರಾಂತ್ಯ ಶನಿವಾರ,ಭಾನುವಾರಗಳಂದು ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧವಿದೆ. ಸೋಮವಾರ ಚಾಮುಂಡೇಶ್ವರಿ ದೇವಿ ಜನ್ಮೋತ್ಸವವಿದ್ದು ಹಾಗೂ ಆಷಾಢ ಮಾಸದ ಕಡೆಯ ಮಂಗಳವಾರ ಸೇರಿದಂತೆ 5 ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ