ಆ್ಯಪ್ನಗರ

ಕೇರಳ ಗಡಿಯಲ್ಲಿ ಬಿಗಿ ಕ್ರಮ ಕೈಗೊಳ್ಳಿ - ಮೈಸೂರು ಜಿಲ್ಲಾಧಿಕಾರಿಗೆ ಸಿದ್ದರಾಮಯ್ಯ ಸೂಚನೆ

“ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ರಾಜ್ಯದ ಗಡಿ ಒಳಗೆ ಯಾರನ್ನೂ ಬಿಡಬೇಡಿ,” ಎಂಬುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

Vijaya Karnataka 31 Mar 2020, 6:26 pm

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಗಿ ಕ್ರಮ ತೆಗೆದುಕೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Vijaya Karnataka Web Siddaramaiah


ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಟಾಸ್ಕ್‌ ಫೋರ್ಷ್‌ ಸಭೆಗೂ ಮುನ್ನ ಮೈಸೂರು ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿದ ಅವರು, “ಕೇರಳದ ಸೋಂಕಿತರು ಮೈಸೂರು, ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ. ಗಡಿ ಬಂದ್‌ ಮಾಡಿ ಎಚ್ಚರಿಕೆ ವಹಿಸಬೇಕು,” ಎಂದು ಸೂಚಿಸಿದರು.

“ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ರಾಜ್ಯದ ಗಡಿ ಒಳಗೆ ಯಾರನ್ನೂ ಬಿಡಬೇಡಿ,” ಎಂದು ಸೂಚನೆ ನೀಡಿದರು. ಇದೇ ವೇಳೆ “ರೈತರು ಬೆಳೆದ ಬೆಳೆಗಳು ನಷ್ಟ ಆಗಬಾರದು. ಎಪಿಎಂಸಿಗಳ ಮೂಲಕ ರೈತರ ಬೆಳೆಗಳನ್ನ ಖರೀದಿ ಆರಂಭಿಸಿ,” ಎಂದು ಸಲಹೆ ನೀಡಿದರು.

ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ವೈರಸ್ ಸೋಂಕು: ಜಿಲ್ಲೆಯಲ್ಲಿ 14ಕ್ಕೇರಿದ ಪೀಡಿತರ ಸಂಖ್ಯೆ

ಕೇರಳದಲ್ಲಿ ಮಂಗಳವಾರದವೇಳೆಗೆ 241 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಲ್ಲಿ ಕರ್ನಾಟಕದ ಗಡಿಯಲ್ಲಿರುವ ಕಾಸರಗೋಡು ಜಿಲ್ಲೆಯೊಂದರಲ್ಲೇ 108 ಜನರಿಗೆ ಕೋವಿಡ್‌ 19 ಸೋಂಕು ತಗುಲಿದೆ. ಇನ್ನು ಮೈಸೂರಿನಲ್ಲಿಯೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಮತ್ತೆರಡು ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ