ಆ್ಯಪ್ನಗರ

ಮೈಸೂರು: ತಲಕಾಡು ಪಂಚಲಿಂಗ ದರ್ಶನಕ್ಕೆ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯ

ಕೊರೊನಾ ಪರಿಸ್ಥಿತಿ ಹಿನ್ನೆಲೆ ಈ ವರ್ಷದ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವವನ್ನು ಸಾವಿರ ಜನಕ್ಕೆ ಸೀಮಿತಗೊಳಿಸಿ ವರ್ಚುವಲ್‌ ಆಗಿ ಆಚರಿಸಲಾಗುತ್ತಿದೆ. ಆದರೂ, ಪಂಚಲಿಂಗ ದರ್ಶನಕ್ಕೆ ಹೋಗುವವರಿಗೆ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯವಾಗಿದೆ.

Vijaya Karnataka Web 27 Nov 2020, 3:30 pm
ತಲಕಾಡು (ಮೈಸೂರು): ಪಂಚಲಿಂಗ ದರ್ಶನಕ್ಕೆ ಬರುವ ಭಕ್ತಾಧಿಗಳು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ವರದಿ ತೆಗೆದುಕೊಂಡು ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.
Vijaya Karnataka Web TALAKADU


ಡಿ. 14ರಂದು ನಡೆಯುವ ಪಂಚಲಿಂಗ ದರ್ಶನದ ಪ್ರಯುಕ್ತ ತಲಕಾಡು ಗ್ರಾಮಸ್ಥರ ಅಭಿಪ್ರಾಯವನ್ನು ತಿಳಿಯುವುದಕ್ಕಾಗಿ ಹಮ್ಮಿಕೊಂಡಿದ್ದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮುಂದಿನ ತಿಂಗಳು ನಡೆಯುವ ಪಂಚಲಿಂಗ ದರ್ಶನದ ಸಮಯದಲ್ಲಿ ದೇವರ ದರ್ಶನವನ್ನು ಮಾಡುವುದಕ್ಕೆ ಬರುವ ಭಕ್ತಾಧಿಗಳು ತಮ್ಮ ಜೊತೆಯಲ್ಲಿಕೋವಿಡ್‌ ಟೆಸ್ಟ್‌ ರಿಸಲ್ಟ್‌ ಪತ್ರವನ್ನು ತೆಗೆದುಕೊಂಡು ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಎಂದು ತಿಳಿಸಿದರು.

ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ: ಮುಖ್ಯಮಂತ್ರಿ ಯಡಿಯೂರಪ್ಪ

ಈ ಬಾರಿ ಕೊರೊನಾ ಇರುವುದರಿಂದ ದಸರಾ ಮಾದರಿಯಲ್ಲಿ ಪಂಚಲಿಂಗ ದರ್ಶನವನ್ನು ಮಾಡುವುದಕ್ಕೆ ಜಿಲ್ಲಾಡಳಿತ ಮುಂದಾಗಲಿದೆ. ಪಂಚಲಿಂಗ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸದೆ ತಮ್ಮ ಮನೆಗಳ ಟಿವಿಯಲ್ಲೇ ವೀಕ್ಷಣೆ ಮಾಡುವ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದರು.

ಡಿ.14ರಿಂದ ತಲಕಾಡು ಪಂಚಲಿಂಗ ದರ್ಶನ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಸಭೆಯಲ್ಲಿ ಅಪರ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ, ಸಿಇಒ ಭಾರತಿ , ಎ.ಸಿ. ವೆಂಕಟರಾಜು, ಜಿಪಂ ಸದಸ್ಯ ಮಂಜುನಾಥ್‌, ತಾಪಂ ಸದಸ್ಯರಾದ ರತ್ನರಾಜು ,ಶಿವಮ್ಮ ಇದ್ದರು.

ಮುಂದಿನ ಎರಡೂವರೆ ವರ್ಷವೂ ನಾನೇ ಸಿಎಂ: ನಾಯಕತ್ವ ಬದಲಾವಣೆ ಚರ್ಚೆಗೆ ಯಡಿಯೂರಪ್ಪ ಇತಿಶ್ರೀ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ