ಆ್ಯಪ್ನಗರ

ಕೊರೊನಾ ವಾರಿಯರ್ಸ್‌ಗಳಿಗೆ ಮೊದಲು ಕೋವಿಡ್‌ ಲಸಿಕೆ : ಡಾ.ಪಿ.ಅಮರನಾಥ್

ಕೇಂದ್ರ ಸರ್ಕಾರವು ಅಧಿಕೃತವಾಗಿ ಪ್ರಕಟಿಸಿದ ಬಳಿಕ ಜಿಲ್ಲೆಯ ಕೊರೊನಾ ವಾರಿಯರ್‌ಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದು ಡಿಹೆಚ್‌ ಓ ಡಾ.ಪಿ.ಅಮರನಾಥ್ ತಿಳಿಸಿದ್ದಾರೆ. ಕೊರೊನಾ ವಾರಿಯರ್ಸ್‌ಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದಿದ್ದಾರೆ.

Vijaya Karnataka Web 21 Nov 2020, 8:06 pm
ಮೈಸೂರು: ಕೇಂದ್ರ ಸರ್ಕಾರವು ಅಧಿಕೃತವಾಗಿ ಪ್ರಕಟಿಸಿದ ಬಳಿಕ ಜಿಲ್ಲೆಯ ಕೊರೊನಾ ವಾರಿಯರ್‌ಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದು ಡಿಹೆಚ್‌ ಓ ಡಾ.ಪಿ.ಅಮರನಾಥ್ ತಿಳಿಸಿದ್ದಾರೆ.
Vijaya Karnataka Web Coronavirus covid vaccine
Picture used for representational purpose only


ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್‌ಗೆ ಲಸಿಕೆ ಸಿಕ್ಕಿದ ಮೇಲೆ, ಅದರಲ್ಲೂ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದ ಬಳಿಕ ಆದ್ಯತೆ ಮೇರಿಗೆ ಜಿಲ್ಲೆಯ ಕೊರೊನಾ ವಾರಿಯರ್‌ಗಳಿಗೆ ಲಸಿಕೆ ನೀಡಲಾಗುವುದು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುವುದು. ಈ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದೆ ಎಂದರು.

ಮೈಸೂರಿನಲ್ಲಿ ಎಷ್ಟು ಮಂದಿ ಕೊರೊನಾ ವಾರಿಯರ್ಸ್‌ ಇದ್ದಾರೆಂಬ ಬಗ್ಗೆ ಅಂದಾಜಿಸಲಾಗುತ್ತಿದೆ. ಅದರಂತೆ ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತೆಯರು, ಡಿ ಗ್ರೂಪ್ ನೌಕರರು ಸೇರಿದಂತೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ 15,100 ಮಂದಿ ಕೊರೊನಾ ವಾರಿಯರ್ಸ್‌ ಇದ್ದಾರೆ. ಇನ್ನುಳಿದಂತೆ ಖಾಸಗಿ ಆಸ್ಪತ್ರೆಗಳಲ್ಲಿನ ಸಿಬ್ಬಂದಿಯನ್ನೂ ಲೆಕ್ಕ ಹಾಕಿ ಅವರಿಗೆ ಮೊದಲು ಲಸಿಕೆ ನೀಡಲಾಗುವುದು ಎಂದರು.

ಕೋವಿಡ್ ಲಸಿಕೆ ಭ್ರಷ್ಟಾಚಾರ ಕೂಪ ಆಗಬಾರದು: ಬೆಂಗಳೂರು ಟೆಕ್‌ ಸಮ್ಮೇಳನದಲ್ಲಿ ಸದ್ಗುರು ಅಭಿಪ್ರಾಯ

ಒಟ್ಟಾರೆಯಾಗಿ 35 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾ ವಾರಿಯರ್ಸ್‌ಗೆ ನೀಡಲಾಗುತ್ತದೆ. ಲಸಿಕೆ ಬಿಡುಗಡೆಯಾದ ಮೇಲೆ ವೃದ್ಧರು, ಸೋಂಕಿಗೆ ಒಳಗಾಗಿ ಗುಣಮುಖರಾದವರು ಸೇರಿದಂತೆ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು.

ಏಪ್ರಿಲ್‌ಗೆ ಆಕ್ಸ್‌ಫರ್ಡ್‌ ಕೊರೊನಾ ಲಸಿಕೆ ಲಭ್ಯ, 2 ಡೋಸ್‌ಗೆ 1,000 ರೂ.: ಅದಾರ್‌ ಪೂನಾವಾಲ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ