ಆ್ಯಪ್ನಗರ

ಮೈಸೂರು: ತನ್ನ ನಂಬರ್‌ ಬದಲಿಗೆ ಜಿಲ್ಲಾಧಿಕಾರಿಗಳ ನಂಬರ್‌ ಕೊಟ್ಟು ಅಧಿಕಾರಿಗಳನ್ನೇ ಯಾಮಾರಿಸಿದ ಕೊರೊನಾ ಸೋಂಕಿತ ವ್ಯಕ್ತಿ!

ಮಾಹಿತಿ ಸಂಗ್ರಹಿಸುವ ವೇಳೆ ಆ ವ್ಯಕ್ತಿ ನನ್ನ ನಂಬರ್‌ ಕೊಟ್ಟಿರುವುದಾಗಿ ಅಧಿಕಾರಿ ತಿಳಿಸಿದರು. ಆಗ ಖುದ್ದು ನನಗೆ ಕ್ವಾರಂಟೈನ್‌ಗೆ ಒಳಗಾಗುವುದು ಮತ್ತು ಆಸ್ಪತ್ರೆಗೆ ದಾಖಲಾಗುವುದರಿಂದ ತಪ್ಪಿಸಿಕೊಳ್ಳಲು ಕೆಲವರು ಏನೆಲ್ಲ ದಾರಿತಪ್ಪಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಅರಿತು ಒಂದು ಕ್ಷಣ ನನಗೆ ಅಚ್ಚರಿಯಾಯಿತು.

Vijaya Karnataka Web 25 Jul 2020, 6:33 pm
ಮೈಸೂರು: ಕೊರೊನಾ ಸೋಂಕಿತನೋರ್ವ ಪರೀಕ್ಷೆ ವೇಳೆ ಮಾಹಿತಿಗಾಗಿ ತನ್ನ ನಂಬರ್‌ ಬದಲಿಗೆ ಮೈಸೂರು ಜಿಲ್ಲಾಧಿಕಾರಿಗಳ ನಂಬರ್‌ ಕೊಟ್ಟು ಕೋವಿಡ್‌ ಸೋಂಕಿತನೊಬ್ಬ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿದ್ದಾನೆ.
Vijaya Karnataka Web ಕೊರೊನಾ
ಕೊರೊನಾ


ನಗರದ ನಿವಾಸಿಯೊಬ್ಬರು ಮೂಗು ಮತ್ತು ಗಂಟಲು ದ್ರವ ಸಂಗ್ರಹ ಕೇಂದ್ರದಲ್ಲಿ ಕೊರೊನಾ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ವ್ಯಕ್ತಿಯ ವಿಳಾಸ, ಮೊಬೈಲ್‌ ನಂಬರ್‌ ಮತ್ತಿತರ ಮಾಹಿತಿಗಳನ್ನು ಪಡೆಯುವಾಗ ಆತ ತನ್ನ ನಂಬರ್‌ ನೀಡುವ ಬದಲು ಮೈಸೂರು ಜಿಲ್ಲಾಧಿಕಾರಿಗಳ ನಂಬರ್‌ ಕೊಟ್ಟಿದ್ದಾನೆ.

ಈತನ ಪರೀಕ್ಷೆ ವರದಿಯಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದರಿಂದ ಅಧಿಕಾರಿಗಳ ಆತನ ನಂಬರ್‌ ಗೆ ಕರೆ ಮಾಡಿದ್ದಾರೆ. ಆದರೆ ಆ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿದ ನಂತರವೇ ಅಧಿಕಾರಿಗಳಿಗೆ ನಿಜಾಂಶ ತಿಳಿದು ಹೀಗೂ ಉಂಟೇ ಎಂದು ಗಾಬರಿಗೊಳಗಾಗಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಪ್ರತಿಕ್ರಿಯಿಸಿ, ನನಗೆ ಕಂಟ್ರೋಲ್‌ ರೂಂ ನಿಂದ ಕರೆ ಮಾಡಿ ನಿಮಗೆ ಕೋವಿಡ್‌ ಪಾಸಿಟಿವ್‌ ಬಂದಿದೆ.. ಕ್ವಾರಂಟೈನ್‌ಗೆ ಒಳಗಾಗಿʼ ಎಂದು ಹೇಳಿದ್ದನ್ನು ಕೇಳಿ ಆಶ್ಚರ್ಯಗೊಂಡೆ. ಆ ವೇಳೆ ನಾನು ಜಿಲ್ಲಾಧಿಕಾರಿ ಮಾತನಾಡುತ್ತಿರುವುದು ಎಂದು ನಂತರ ಅಧಿಕಾರಿಗಳಿಗೆ ತಿಳಿಸಿದೆ.

ಮಾಹಿತಿ ಸಂಗ್ರಹಿಸುವ ವೇಳೆ ಆ ವ್ಯಕ್ತಿ ನನ್ನ ನಂಬರ್‌ ಕೊಟ್ಟಿರುವುದಾಗಿ ಅಧಿಕಾರಿ ತಿಳಿಸಿದರು. ಆಗ ಖುದ್ದು ನನಗೆ ಕ್ವಾರಂಟೈನ್‌ಗೆ ಒಳಗಾಗುವುದು ಮತ್ತು ಆಸ್ಪತ್ರೆಗೆ ದಾಖಲಾಗುವುದರಿಂದ ತಪ್ಪಿಸಿಕೊಳ್ಳಲು ಕೆಲವರು ಏನೆಲ್ಲ ದಾರಿತಪ್ಪಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಅರಿತು ಒಂದು ಕ್ಷಣ ನನಗೆ ಅಚ್ಚರಿಯಾಯಿತು. ಜೊತೆಗೆ ನಗು ಬಂತು ಎಂದು ಮುಗುಳ್ನಕ್ಕರು.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜನರು ಸಹಕರಿಸಬೇಕು, ಅಲ್ಲದೇ ಸರಿಯಾದ ಹಾಗೂ ಸೂಕ್ತ ಮಾಹಿತಿ ನೀಡಬೇಕು. ಒಂದು ವೇಳೆ ಸಂಪರ್ಕಿಸುವ ಮಾಹಿತಿ ತಪ್ಪಿದ್ದರೆ ಕೊರೊನಾ ಸೋಂಕಿತರು ಮತ್ತು ಅವರ ಪ್ರಾಥಮಿಕ, ಸೆಕೆಂಡರಿ ಸಂಪರ್ಕದಲ್ಲಿದ್ದವರನ್ನು ಗುರುತಿಸುವುದು ತುಂಬಾ ಕಷ್ಟ. ದಾರಿ ತಪ್ಪಿಸುವ ಕೆಲಸ ಮಾಡಬಾರದೆಂದು ಮನವಿ ಮಾಡಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ