ಆ್ಯಪ್ನಗರ

Santro Ravi case | ಶೀಘ್ರವೇ ಸ್ಯಾಂಟ್ರೋ ರವಿ ಬಂಧನ, ಕೇಸ್‌ನಲ್ಲಿ ಪೊಲೀಸರ ಮೇಲೆ ಒತ್ತಡ ಇಲ್ಲ: ಎಡಿಜಿಪಿ ಅಲೋಕ್ ಕುಮಾರ್

ADGP Alok Kumar in Mysuru: ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ಮೈಸೂರಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದು, ಸ್ಯಾಂಟ್ರೋ ರವಿ ಬಂಧನಕ್ಕಾಗಿ ಪೊಲೀಸರ 3-4 ತಂಡಗಳು ಕೆಲಸ ಮಾಡುತ್ತಿವೆ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸ್ಯಾಂಟ್ರೋ ರವಿ ವಾಸಿಸುತ್ತಿರುವ ಮನೆ ಹಾಗೂ ಇನ್ನಿತರ ಆಸ್ತಿಪಾಸ್ತಿ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತನ ಎಲ್ಲಾ ಬ್ಯಾಂಕ್ ಅಕೌಂಟ್‌ಗಳನ್ನು ಜಾಲಾಡುತ್ತಿದ್ದೇವೆ, ಮನಿ ಲಾಂಡ್ರಿಂಗ್ ಕಾನೂನನ್ನು ಉಲ್ಲಂಘನೆ ಮಾಡಿದ್ದಾನೆಯೇ ಅನ್ನೋ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದರು.

Edited byಹೇಮಂತ್ ಕುಮಾರ್ ಎಸ್ | Lipi 10 Jan 2023, 6:58 pm

ಹೈಲೈಟ್ಸ್‌:

  • ಸ್ಯಾಂಟ್ರೋ ರವಿ ವಿರುದ್ಧ ಲುಕ್ ಔಟ್ ನೋಟಿಸ್‌, ಆತನ ಮೊಬೈಲ್ ಸ್ವಿಚ್ಡ್‌ ಆಫ್
  • ಆತನ ಬಂಧನಕ್ಕಾಗಿ ಪೊಲೀಸರ 3-4 ತಂಡಗಳು ಕೆಲಸ
  • ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಜಿಲ್ಲೆಗಳಲ್ಲಿ ಹುಡುಕಾಟ
  • ಇ.ಡಿ ಮತ್ತು ಐಟಿಗೆ ಪ್ರತ್ಯೇಕ ದೂರು ಸಲ್ಲಿಕೆಯಾಗಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Alok Kumar
ಎಡಿಜಿಪಿ ಅಲೋಕ್ ಕುಮಾರ್
ಮೈಸೂರು: ಮೂಲತಃ ಮೈಸೂರಿನವನಾಗಿರುವ ಕೆ.ಎಸ್‌.ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ವಿರುದ್ಧ ಈ ಹಿಂದೆ ಹಲವೆಡೆ ಪ್ರಕರಣ ದಾಖಲಾಗಿದೆ. ವೇಶ್ಯಾವಾಟಿಕೆ ದಂಧೆಯಲ್ಲಿ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇದೆ ಎನ್ನಲಾಗುತ್ತಿದೆ. ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಗೆ ತಲೆನೋವಾಗಿರುವ ಸ್ಯಾಂಟ್ರೋ ರವಿ ವಿಚಾರ ಬಗೆದಷ್ಟೂ ವಿಸ್ತರಿಸಿಕೊಳ್ಳುತ್ತಿದೆ. ಸ್ಯಾಂಟ್ರೋ ರವಿ ಬಂಧನ ಆಗದೆ ಇರೋದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈಗ ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಕಾರ್ಯಾಚರಣೆಗೆ ಪ್ರವೇಶಿಸಿದ್ದಾರೆ.
Santro Ravi: ಯಾರೀತ ಸ್ಯಾಂಟ್ರೋ ರವಿ? ಈತನ ಹಿನ್ನೆಲೆ ಇಲ್ಲಿದೆ!
ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ಮೈಸೂರಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದು, ಸ್ಯಾಂಟ್ರೋ ರವಿ ಬಂಧನಕ್ಕಾಗಿ ಪೊಲೀಸರ 3-4 ತಂಡಗಳು ಕೆಲಸ ಮಾಡುತ್ತಿವೆ. ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸ್ಯಾಂಟ್ರೋ ರವಿ ವಾಸಿಸುತ್ತಿರುವ ಮನೆ ಹಾಗೂ ಇನ್ನಿತರ ಆಸ್ತಿಪಾಸ್ತಿ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತನ ಎಲ್ಲಾ ಬ್ಯಾಂಕ್ ಅಕೌಂಟ್‌ಗಳನ್ನು ಜಾಲಾಡುತ್ತಿದ್ದೇವೆ, ಮನಿ ಲಾಂಡ್ರಿಂಗ್ ಕಾನೂನನ್ನು ಉಲ್ಲಂಘನೆ ಮಾಡಿದ್ದಾನೆಯೇ ಅನ್ನೋ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಹಾಗೊಮ್ಮೆ ಮನಿ ಲಾಂಡ್ರಿಂಗ್ ಕಾನೂನು ಉಲ್ಲಂಘನೆಯಾಗಿದ್ರೆ, ಹೊಸ ಕೇಸ್ ಕೂಡ ಮಾಡುತ್ತೇವೆ. ಪೊಲೀಸರು ಆತನ ಪತ್ತೆಗೆ ಎಲ್ಲಾ ಅಯಾಮಗಳಲ್ಲೂ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
Santro Ravi case | ಸ್ಯಾಂಟ್ರೋ ರವಿ ವಿರುದ್ಧ ಸಮಗ್ರ ತನಿಖೆಗೆ ಸೂಚನೆ: ಪ್ರತಿಪಕ್ಷಗಳ ನಾಯಕರ ಜತೆಗೂ ಸಂಪರ್ಕ ಎಂದ ಸಿಎಂ
ಮೊಬೈಲ್ ಸ್ವಿಚ್ಡ್‌ ಆಫ್:

ಸ್ಯಾಂಟ್ರೋ ರವಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಆರ್.ಆರ್. ನಗರದ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಎಲ್ಲ ಅಗತ್ಯ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಎಷ್ಟು ಬ್ಯಾಂಕ್ ಖಾತೆ ಇವೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆತನ ಆಸ್ತಿ ಜಪ್ತಿ ಬಗ್ಗೆಯೂ ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅಲೋಕ್ ಕುಮಾರ್ ತಿಳಿಸಿದರು.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಸ್ಯಾಂಟ್ರೋ ರವಿಗಾಗಿ ಹುಡುಕಾಟ ನಡೆದಿದೆ. ಪ್ರಕರಣ ದಾಖಲಾಗಿ ಈಗಾಗಲೇ 8 ದಿನವಾಗಿದೆ, ಆತ ಸಿಗಬೇಕಾಗಿತ್ತು. ಆತನ ಮೊಬೈಲ್ ಸ್ವಿಚ್ಡ್‌ ಆಫ್ ಆಗಿದ್ದು, ಹೀಗಾಗಿ ಬಂಧನ ಕಷ್ಟವಾಗುತ್ತಿದೆ. ಪ್ರಕರಣದಲ್ಲಿ ಪೊಲೀಸರ ಮೇಲೆ ಯಾವುದೇ ಒತ್ತಡ ಇಲ್ಲ. ಅದೇ ಕಾರಣಕ್ಕೆ‌ ನಾನು ಇಲ್ಲಿಗೆ ಬಂದು ಮಾಹಿತಿ‌ ಪಡೆದಿದ್ದೇ‌ನೆ. ಆದಷ್ಟು ಬೇಗ ಸ್ಯಾಂಟ್ರೋ ರವಿಯ ಬಂಧನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ಯಾಂಟ್ರೋ ರವಿ ವಿವಾದ: ನನ್ನ ವಿರುದ್ಧ ಮಾಡಿರುವ ಆರೋಪವನ್ನು ಎಚ್‌ಡಿಕೆ ಸಾಬೀತು ಮಾಡಲಿ-ಆರಗ ಜ್ಞಾನೇಂದ್ರ ಸವಾಲು
ಇ.ಡಿ ಮತ್ತು ಐಟಿಗೆ ದೂರು:
ಸ್ಯಾಂಟ್ರೋ ರವಿ ವಿರುದ್ಧ ಇ.ಡಿ ಮತ್ತು ಐಟಿಗೆ ಪ್ರತ್ಯೇಕ ದೂರು ಸಲ್ಲಿಕೆಯಾಗಿದೆ. ದೂರು ದಾಖಲಿಸಿದ ಮೈಸೂರು ಒಡನಾಡಿ ಸೇವಾ ಸಂಸ್ಥೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಅಮಾಯಕ ಹೆಣ್ಣು ಮಕ್ಕಳನ್ನು ಅನೈತಿಕ ಚಟುವಟಿಕೆಗಳಿಗೆ ಮಾರಾಟ, ಸರಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮ ಹಣ ಸಂಪಾದನೆ ಹಾಗೂ ಸಮಾಜಘಾತುಕ ಕೆಲಸದಿಂದ ಸಮಾಜಕ್ಕೆ ತೊಡಕಾಗಿರುವ ಬಗ್ಗೆ ದೂರು ದಾಖಲಿಸಲಾಗಿದೆ. ಹಾಗೆಯೇ ಸ್ಯಾಂಟ್ರೋ ರವಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆಯಲಾಗಿದೆ.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ