ಆ್ಯಪ್ನಗರ

ಡಿ.ದೇವರಾಜ ಅರಸು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ‍್ಯಕ್ರಮ

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹೊರತರುವಲ್ಲಿ ಪಠ್ಯೇತರ ಚಟುವಟಿಕೆಗಳು ಪೂರಕವಾಗಿವೆ ಎಂದು ಮೈಸೂರು ವಿ.ವಿ.ಯ ಮನೋವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಜಿ.ವೆಂಕಟೇಶ್‌ ಅಭಿಪ್ರಾಯಪಟ್ಟರು.

Vijaya Karnataka 26 Sep 2018, 5:00 am
ಹುಣಸೂರು : ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹೊರತರುವಲ್ಲಿ ಪಠ್ಯೇತರ ಚಟುವಟಿಕೆಗಳು ಪೂರಕವಾಗಿವೆ ಎಂದು ಮೈಸೂರು ವಿ.ವಿ.ಯ ಮನೋವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಜಿ.ವೆಂಕಟೇಶ್‌ ಅಭಿಪ್ರಾಯಪಟ್ಟರು.
Vijaya Karnataka Web cultural program in college
ಡಿ.ದೇವರಾಜ ಅರಸು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ‍್ಯಕ್ರಮ


ನಗರದ ಡಿ.ದೇವರಾಜ ಅರಸು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸದ್ದ 2018-19ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್‌, ಸ್ಕೌಟ್ಸ್‌ ಅಂಡ್‌ ಗೈಡ್ಸ್‌, ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಜೀವನ ರೂಪಿಸಿ, ಬದುಕಿನ ದಾರಿ ಕಟ್ಟಿಕೊಡುವಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಎನ್‌ಎಸ್‌ಎಸ್‌ ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಲಿದ್ದು, ವಿದ್ಯಾರ್ಥಿಗಳ ಕೆಲ ದುರ್ಬಲತೆ, ವಿಫಲತೆಯನ್ನು ಸಕಾರಾತ್ಮಕತೆಯತ್ತ ಕೊಂಡೊಯ್ಯುವ ಶಕ್ತಿಯೂ ಇಂತಹ ಘಟಕಗಳಿಗಿದೆ. ವಿನಯವಿಲ್ಲದ ಶಿಕ್ಷ ಣ ಅಹಂಕಾರಕ್ಕೆ ಸಮವಾದುದಾಗಿದ್ದು, ವಿನಯ, ನಾಯಕತ್ವವನ್ನು ಕಟ್ಟಿಕೊಡುವ ನಾನಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಸೂಚಿಸಿದರು.

ನೀತಿ ರೂಪಣೆ ಅಗತ್ಯ: ಕ್ರೀಡೆ ಸೇರಿದಂತೆ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದಾಗಿ ಪ್ರತಿಭೆ ಇದ್ದರೂ ಸೇರಲು ಹಿಂಜರಿಯುತ್ತಾರೆ. ಈ ನಿಟ್ಟಿನಲ್ಲಿ ಅಂತಹ ವಿದ್ಯಾರ್ಥಿಗಳಿಗೆ ನೆರವಾಗಲು ಸರಕಾರ ಹೊಸ ನೀತಿ ರೂಪಿಸಿ, ನೆರವಿಗೆ ಬರುವ ಅವಶ್ಯವಿದೆ ಎಂದರು.

ಅಧ್ಯಕ್ಷ ತೆ ವಹಿಸಿದ್ದ ಶಾಸಕ ಎಚ್‌.ವಿಶ್ವನಾಥ್‌ ಮಾತನಾಡಿ, ಕಾಲೇಜಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಉನ್ನತ ಶಿಕ್ಷ ಣ ಸಚಿವ ಜಿ.ಟಿ.ದೇವೇಗೌಡರು 5.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದು, ಅಭಿವೃದ್ಧಿ ಕಾಮಗಾರಿಗಳು ಶೀಘ್ರ ಆರಂಭಗೊಳ್ಳಲಿವೆ. ಕಾಲೇಜಿನಲ್ಲಿ ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಅಬಕಾರಿ ಉಪ ಆಯುಕ್ತ ಮಾದೇಶ್‌ ಮಾತನಾಡಿ, ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗವನ್ನು ಎದುರಿಸಲು ಹೆಚ್ಚಿನ ಆಸಕ್ತಿ ತೋರಬೇಕೆಂದು ಆಶಿಸಿದರು.

ಪ್ರಾಂಶುಪಾಲ ಡಾ.ವೆಂಕಟೇಶಯ್ಯ, ಸಿಡಿಸಿ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್‌, ಸಿ.ಡಿ.ಸಿ. ಸದಸ್ಯ ಪುಟ್ಟರಾಜು ಮಾತನಾಡಿದರು. ವಿವಿಧ ಘಟಕಗಳ ಸಂಚಾಲಕರಾದ ಡಾ.ಉಮಾಕಾಂತ್‌, ಡಾ. ಬಿ.ವಿ.ಗಣೇಶ್‌, ಸಂತೋಷ್‌, ಡಾ.ಕಿರಣ್‌ಕುಮಾರ್‌, ಡಾ.ವಿಜಯಲಕ್ಷ್ಮೀ, ಮಂಜುನಾಥ್‌ಕಟ್ಟೆ ಸೇರಿದಂತೆ ಸಿಡಿಸಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

ನಮ್ಮಲ್ಲಿನ ಪ್ರತಿಭೆಯನ್ನು ಓರೆಗೆ ಹಚ್ಚಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಸ್ಕೌಟ್‌ ಅಂಡ್‌ ಗೈಡ್ಸ್‌ನಿಂದಾಗಿ ಅನೇಕ ಪಾಠಕಲಿತಿದ್ದೇನೆ.

-ವೆಂಕಟೇಶ್‌, ಅಂತಿಮ, ಬಿ.ಎ.


ಪಠ್ಯೇತರ ಚಟುವಟಿಕೆಗಳಿಗೆ ಸಂಜೀವಿನಿಯಾಗಿರುವ ಕ್ರೀಡೆ, ಎನ್‌ಎಸ್‌ಎಸ್‌, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದೇ ಒಂದು ಹೆಮ್ಮೆ.

-ಕಿರಣ, ದ್ವಿತೀಯ, ಬಿ.ಎ. ಹುಣಸೂರು


ಕೈಕೊಟ್ಟ ಮೈಕ್‌... ಗರಂ ಆದ ಶಾಸಕ

ಸಮಾರಂಭದ ಆರಂಭದಿಂದಲೇ ಮೈಕ್‌ ಕೈಕೊಟ್ಟಿತು. ಪ್ರಾರ್ಥನೆ, ಸ್ವಾಗತದ ನಂತರವೂ ಸರಿಯಾಗಲಿಲ್ಲ. ಕೊನೆಗೆ ಮೈಕ್‌ ಇಲ್ಲದೆ ಮಾತನಾಡಿದ ಶಾಸಕ ವಿಶ್ವನಾಥ್‌, ಪ್ರಾಂಶುಪಾಲರೇ ಹೀಗೆ ಬೇಜವಾಬ್ದಾರಿಯಿಂದ ಕಾರ್ಯಕ್ರಮ ನಡೆಸಬೇಡಿ ಎಂದು ಗರಂ ಆದ ಶಾಸಕರು ಮತ್ತೊಮ್ಮೆ ಬರುತ್ತೇನೆ ಎಂದು ಹೇಳಿ ಸ್ವಲ್ಪವೇ ಮಾತನಾಡಿ ಕಾರ್ಯಕ್ರಮ ಅರ್ಧಕ್ಕೆ ಹೊರ ನಡೆದರು.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ